ವಾಲ್ಮೀಕಿ ಮಹರ್ಷಿಗಳ ಆದರ್ಶ ತತ್ವಗಳನ್ನು ಪ್ರತಿಯೊಬ್ಬರೂ ಅಳವಡಿಕೊಳ್ಳಬೇಕು-ರಾಜೇಶ್

ಜಗಳೂರು:

      ವಾಲ್ಮೀಕಿ ಮಹರ್ಷಿಗಳ ಆದರ್ಶ ತತ್ವಗಳನ್ನು ಪ್ರತಿಯೊಬ್ಬರೂ ಅಳವಡಿಕೊಳ್ಳಬೇಕೆಂದು ಮಾಜಿ ಶಾಸಕ ಹೆಚ್.ಪಿ.ರಾಜೇಶ್ ಹೇಳಿದರು.

     ತಾಲ್ಲೂಕಿನ ಕಾನನಕಟ್ಟೆ ಗ್ರಾಮದಲ್ಲಿ ಆಯೋಜಿಸಿದ್ದ ವಾಲ್ಮೀಕಿ ಜಯಂತೋತ್ಸವದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

     ಪ್ರತಿಯೊಂದು ಸಮಾಜದಲ್ಲಿ ಆದರ್ಶ ಪುರುಷರು ಇದ್ದು ಅವರುಗಳನ್ನು ಗೌರವಿಸುವಂತಹ ಕೆಲಸ ಎಲ್ಲಾ ಸಮಾಜಗಳು ಮಾಡಬೇಕು ಎಂದರು.

       ಜೆಡಿಎಸ್ ಮುಖಂಡ ಚಿಕ್ಕಮ್ಮನಹಟ್ಟಿ ದೇವೇಂದ್ರಪ್ಪ ಮಾತನಾಡಿ ಪುರಾತನ ಕಾಲದಿಂದಲೂ ವಾಲ್ಮೀಕಿ ಸಮುದಾಯ ತನ್ನದೇ ಆದ ಇತಿಹಾಸವನ್ನು ಹೊಂದಿದೆ ನಮ್ಮ ಸಮಾಜದ ಮೂಲ ಪುರಷ ವಾಲ್ಮೀಕಿ ಮಹರ್ಷಿಯವರ ಜೀವನ ಸಾಧನೆ ಹಾಗೂ ತತ್ವಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳುವ ಮೂಲಕ ಸಮಾಜಕ್ಕೆ ಮಾದರಿಯಾಗಬೇಕು ಎಂದವರು ತಿಳಿಸಿದರು.

       ಕೆಪಿಸಿಸಿ ಎಸ್ಟಿ ಘಟಕದ ರಾಜ್ಯಾಧ್ಯಕ್ಷ ಕೆ.ಪಿ.ಪಾಲಯ್ಯ ಮಾತನಾಡಿ ಮಹರ್ಷಿ ವಾಲ್ಮಿಕಿ ಜಯಂತಿಯ ಜೊತೆಗೆ ಸಮಾಜದ ಎಲ್ಲಾ ಆದರ್ಶಪುರುಷರ ಜಯಂತಿಗಳನ್ನು ಆಚರಣೆ ಮಾಡುವುದರ ಮೂಲಕ ಗ್ರಾಮದಲ್ಲಿ ಸಹೋದರತೆ ಸಹಬಾಳ್ವೆ ಸಮಾನತೆಯನ್ನು ಕಾಪಾಡಿಕೊಂಡಾಗಮಾತ್ರ ಗ್ರಾಮಗಳು ಅಭಿವೃದ್ಧಿಯಾಗಲು ಸಹಕಾರಿಯಾಗುತ್ತದೆ ಈ ನಿಟ್ಟಿನಲ್ಲಿ ಯುವಕರು ಹೆಚ್ಚಿನ ಗಮನವನ್ನು ಹರಿಸಿ ಶೈಕ್ಷಣಿಕವಾಗಿ ಆರ್ಥಿಕವಾಗಿ ಮುಂದುವರೆಯಬೇಕೆಂದರು.

       ಕಾರ್ಯಕ್ರಮದಲ್ಲಿ ಮೊಳಕಾಲ್ಮೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಧ್ಯಾಪರ ಡಾ||ಯೋಗಾನಂದ ಅವರು ಮಹರ್ಷಿ ವಾಲ್ಮೀಕಿ ಬಗ್ಗೆ ವಿಶೇಷ ಉಪನ್ಯಾಸವನ್ನು ನೀಡಿದರು ಮುಖಂಡ ಕಾನನಕಟ್ಟೆ ಪ್ರಭು ಪ್ರಾಸ್ತಾವಿಕವಾಗಿ ಮಾತನಾಡಿದರು.

        ಈ ಸಂದರ್ಭದಲ್ಲಿ ನಾಯಕ ಸಮಾಜದ ಉಪಾಧ್ಯಕ್ಷ ಓಬಣ್ಣ, ಕಾರ್ಯದರ್ಶಿ ಸೂರಲಿಂಗಪ್ಪ, ತಾಲ್ಲೂಕು ಪಂಚಾಯಿತಿ ಸದಸ್ಯ ಎಸ್.ಬಿ.ಕುಬೇಂದ್ರಪ್ಪ, ಮುಖಂಡ ನಾಗಲಿಂಗಪ್ಪ, ಎಸ್.ಎಫ್.ಐ ಜಿಲ್ಲಾಧ್ಯಕ್ಷ ಮಹಾಲಿಂಗಪ್ಪ, ಡಿಎಸ್‍ಎಸ್ ತಾಲ್ಲೂಕು ಸಂಚಾಲಕ ಸತೀಶ್, ಮುಖಂಡರಾದ ಡಿ.ಆರ್.ಹನುಮಂತಪ್ಪ, ರಾಜಪ್ಪ, ನಾರಾಯಣಪ್ಪ ಸೇರಿದಂತೆ ಗ್ರಾಮದ ಮುಖಂಡರು ಹಾಜರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

 

Recent Articles

spot_img

Related Stories

Share via
Copy link