ಬೆಂಗಳೂರು
ವೇಗವಾಗಿ ಬಂದ ಬಿಎಂಟಿಸಿ ಬಸ್ ಹರಿದು ರಸ್ತೆ ದಾಟುತ್ತಿದ್ದ ವೃದ್ಧ ಕೃಷ್ಣಪ್ಪ ಎನ್ನುವರು ಮೃತಪಟ್ಟಿರುವ ದುರ್ಘಟನೆ ಯಲಹಂಕ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಕೋಗಿಲು ಮುಖ್ಯರಸ್ತೆಯಲ್ಲಿ ನಡೆದಿದೆ.
ಕೋಗಿಲುವಿನ ಕೃಷ್ಣಪ್ಪ (70)ಅವರು ಗುರುವಾರ ಬೆಳಿಗ್ಗೆ 9ರ ವೇಳೆ ಕೃಷ್ಣಪ್ಪ ಅವರು ಕೋಗಿಲು ಮುಖ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದಾಗ ಬಿಎಂಟಿಸಿ ಬಸ್ ಹರಿದು ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಪ್ರಕರಣ ದಾಖಲಿಸಿರುವ ಯಲಹಂಕ ಸಂಚಾರ ಪೊಲೀಸರು ಬಸ್ ಚಾಲಕನನ್ನು ಬಂಧಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ ಎಂದು ಡಿಸಿಪಿ ಸಾರಾ ಫಾತಿಮಾ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ