ಹಾವೇರಿ:
ಹಾವೇರಿಯ ಭ್ರಷ್ಟಾಚಾರ ನಿಗ್ರದಳ ಪೊಲೀಸ್ ಠಾಣೆ ವತಿಯಿಂದ ಅಕ್ಟೋಬರ್ 29 ರಿಂದ ನವೆಂಬರ್ 3ರವರೆಗೆ ಭ್ರಷ್ಟಾಚಾರ ತಡೆ ಜಾಗೃತಿ ಸಪ್ತಾಹ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಮಂಗಳವಾರ ರಾಣೇಬೆನ್ನೂರ ನಗರದ ಬಿ.ಎ.ಜೆ.ಎಸ್.ಎಸ್. ಕಾಲೇಜಿನ ಪಿ.ಯು.ಸಿ. ಹಾಗೂ ಡಿ.ಇಡಿ ವಿದ್ಯಾರ್ಥಿಗಳಿಗೆ ಭ್ರಷ್ಟಾಚಾರ ನಿರ್ಮೂಲನೆ ಕುರಿತು ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ಹಾವೇರಿ ಭ್ರಷ್ಟಚಾರ ನಿಗ್ರಹದಳ ಪೊಲೀಸ್ ಠಾಣೆ ಪೊಲೀಸ್ ಉಪಾಧೀಕ್ಷಕ ಎಸ್.ಕೆ.ಪ್ರಹ್ಲಾದ ಅವರು ಮಾತನಾಡಿ, ಭ್ರಷ್ಟಾಚಾರ ತಡೆಗಟ್ಟಲು ಯುವ ಜನಾಂಗ ಸಕ್ರೀಯಾಗಿ ಪಾಲ್ಗೊಳ್ಳಬೇಕು ಹಾಗೂ ಭ್ರಷ್ಟಾಚಾರದ ಬಗ್ಗೆ ತಮಗೆ ಮಾಹಿತಿ ಇದ್ದಲ್ಲಿ ಕೂಡಲೇ ಭ್ರಷ್ಟಾಚಾರ ನಿಗ್ರದಳ ಪೊಲೀಸ್ ಠಾಣೆ ತಿಳಿಸುವಂತೆ ಸಲಹೆ ನೀಡಿದರು.
ಪ್ರಾಂಶುಪಾಲ ಎಸ್.ಎಂ.ಟಾಮೆ ಅವರು ಭ್ರಷ್ಟಾಚಾರ ನಿರ್ಮೂಲನೆಗೆ ಪ್ರತಿಯೊಬ್ಬ ನಾಗರಿಕರು ಕಾರ್ಯತತ್ಪರರಾಗಬೇಕು ಎಂದು ಹೇಳಿದರು.ಅದರಂತೆ ಹಾವೇರಿ ನಗರದ ಟಿ.ಎಂ.ಎ.ಇ. ಸೊಸೈಟಿಯ ಬಿ.ಇಡಿ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಭ್ರಷ್ಟಚಾರ ನಿಗ್ರಹದಳ ಪೊಲೀಸ್ ಠಾಣೆ ಪೊಲೀಸ್ ನಿರೀಕ್ಷಕ ಬಿ.ಕೆ.ಹಳಬಣ್ಣನವರ ಅವರು ಭ್ರಷ್ಟಾಚಾರ ನಿರ್ಮೂಲನೆ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿದರು.
ಭ್ರಷ್ಟಾಚಾರ ಮುಕ್ತ ಭಾರತ ನಿರ್ಮಾಣದಲ್ಲಿ ನಾಗರಿಕರ ಪಾತ್ರ ಎಂಬ ವಿಷಯದ ಕುರಿತು ಬಿ.ಇಡಿ. ವಿದ್ಯಾರ್ಥಿಗಳಿಗೆ ಏರ್ಪಡಿಸಲಾದ ಭಾಷಣ ಸ್ಪರ್ಧೆಯಲ್ಲಿ ವಿರೇಶ ಹಂಚಿಮನಿ ಪ್ರಥಮ, ವೆಂಕಟೇಶ್ ಜಂಗ್ಲಿ ದ್ವಿತೀಯ ಹಾಗೂ ವೀಣಾ ಗುತ್ತಲ ತೃತೀಯ ಸ್ಥಾನ ಪಡೆದುಕೊಂಡರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ