ನಟ ವಿನೋದ್ ರಾಜ್ ಅವರ 1 ಲಕ್ಷ ನಗದು ದೋಚಿ ಪರಾರಿಯಾಗಿದ್ದ ಖತರ್ನಾಕ್ ಕಳ್ಳ ಅಂದರ್!!!

ಬೆಂಗಳೂರು

       ಅಭಿಮಾನಿಯ ನೆಪದಲ್ಲಿ ಕಾರಿನಿಂದ ಬಂದಿಳಿದ ನಟ ವಿನೋದ್ ರಾಜ್ ಅವರ ಗಮನ ಬೇರೆಡೆ ಸೆಳೆದು 1 ಲಕ್ಷ ನಗದು ದೋಚಿ ಪರಾರಿಯಾಗಿದ್ದ ಖತರ್ನಾಕ್ ಓಜಿಕುಪ್ಪಂ ಗ್ಯಾಂಗ್‍ನ ಆರೋಪಿಯನ್ನು ನೆಲಮಂಗಲ ಪೊಲೀಸರು ಬಂಧಿಸಿದ್ದಾರೆ.

        ಕಳೆದ ತಿಂಗಳು ಅಭಿಮಾನಿ ಸೋಗಿನಲ್ಲಿ ಬಂದು ಕಾರು ನಿಲ್ಲಿಸಿಕೊಂಡು ನಿಂತಿದ್ದ ವಿನೋದ್ ರಾಜ್‍ರನ್ನು ಮಾತನಾಡಿಸಿ ಕಾರು ಪಂಚರ್ ಮಾಡಿ ಕಾರಿನಲ್ಲಿದ್ದ 1 ಲಕ್ಷ ಹಣವನ್ನ ಗ್ಯಾಂಗ್ ದೋಚಿ ಪರಾರಿಯಾಗಿತ್ತು. ಪ್ರಕರಣದ ಬೆನ್ನಟ್ಟಿದ್ದ ನೆಲಮಂಗಲ ಪೆÇಲೀಸರು ಓಜಿಕುಪ್ಪಂ ಗ್ಯಾಂಗ್‍ನ ರಾಜು ಅಲಿಯಾಸ್ ಹೈಟೆಕ್ ರಾಜುನನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ

       ಬಂಧಿತ ರಾಜು ಅಲಿಯಾಸ್ ಹೈಟೆಕ್ ರಾಜು ವಿಲಾಸಿ ಜೀವನ ಮಾಡುತ್ತಿದ್ದ. ಇವನು ಧರಿಸುತ್ತಿದ್ದ ಶರ್ಟ್, ಪ್ಯಾಂಟ್‍ಗಳು ಪ್ರತಿಷ್ಠಿತ ಕಂಪನಿಗಳದ್ದಾಗಿದ್ದು ಬರೋಬ್ಬರಿ 5 ರಿಂದ 8 ಸಾವಿರ ಬೆಲೆ ಬಾಳುವಂತದ್ದಾಗಿದೆ. ಶೂಗಳು, ಗಾಗಲ್ಸ್ ಹಾಕಿಕೊಂಡು ಶ್ರೀಮಂತನಂತೆ ಐಶಾರಾಮಿ ಜೀವನ ಮಾಡುತ್ತಿದ್ದ ಎಂದು ಪೆÇಲೀಸರು ತಿಳಿಸಿದ್ದರೆ.

       ಹೈಟೆಕ್ ರಾಜುನನ್ನು ಬಂಧಿಸಿ ಗ್ಯಾಂಗ್ ಇನ್ನಿತರ ಖದೀಮರಿಗೆ ನೆಲಮಂಗಲ ಸಿಪಿಐ ಅನಿಲ್ ಕುಮಾರ್ ನೇತೃತ್ವದ ತಂಡ ಬಲೆ ಬೀಸಿದೆ. ಆರೋಪಿ ಬಂಧನದಿಂದ ನಟ ವಿನೋದ್ ರಾಜ್ ಸಂತಸ ವ್ಯಕ್ತಪಡಿಸಿ ಮುಂದೆ ಈ ಖದೀಮರ ಗ್ಯಾಂಗ್ ಯಾರಿಗೂ ದ್ರೋಹ ಮಾಡದಂತೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ 

 

Recent Articles

spot_img

Related Stories

Share via
Copy link