ದಾವಣಗೆರೆ:
ಗುಣಮಟ್ಟದ ಉನ್ನತ ಶಿಕ್ಷಣ ನೀಡುವ ನಿಟ್ಟಿನಲ್ಲಿ ದಾವಣಗೆರೆ ವಿವಿಯ ವ್ಯಾಪ್ತಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕೆಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ವಿದ್ಯಾರ್ಥಿ ಸಂಘಟನೆ ಹಾಗೂ ಭಾರತ ವಿದ್ಯಾರ್ಥಿ ಫೆಡರೇಷನ್ನ ಪದಾಧಿಕಾರಿಗಳು ಶನಿವಾರ ವಿವಿಯ ರಿಜಿಸ್ಟ್ರಾರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕೆವಿಎಸ್ನ ಸತೀಶ್ ಅರವಿಂದ್ ಮಾತನಾಡಿ, ಈಗಾಗಲೇ ಯುಜಿಸಿ ಅನುಮೋದಿಸಿರುವ ಕರ್ನಾಟಕದ 28 ವಿಶ್ವವಿದ್ಯಾನಿಲಯಗಳಲ್ಲಿ ಕನಿಷ್ಠ 6,000 ಪ್ರಾಧ್ಯಾಪಕರ ಹುದ್ದೆಗಳು ಖಾಲಿಯಿವೆ. ಮೈಸೂರು ವಿವಿ ವ್ಯಾಪ್ತಿಯಲ್ಲೂ 55 ಬ್ಯಾಕ್ಲಾಗ್ ಹುದ್ದೆಗಳೂ ಸೇರಿದಂತೆ 205 ಹುದ್ದೆಗಳಿಗೆ ಸರ್ಕಾರ ಅನುಮೋದಿಸಿದ್ದರೂ ಆಯ್ಕೆ ಪ್ರಕ್ರಿಯೆ ಇನ್ನೂ ಶುರುವಾಗಿಲ್ಲ ಭಾರತದ ಉನ್ನತ ಶಿಕ್ಷಣವನ್ನು ಉತ್ತೇಜಿಸುವ ನಿಟ್ಟಿನಲ್ಲಿ, ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೂ ಉನ್ನತ ಶಿಕ್ಷಣದಲ್ಲಿ ಅವಕಾಶ ಕಲ್ಪಿಸುವಂತಹ ಕ್ರಮಗಳನ್ನು ಕೈಗೊಳ್ಳುತ್ತಾ ಉತ್ತಮ ಪಠ್ಯ, ಭೋಧಕರ ನೇಮಕಾತಿ, ಸಂಶೋಧನೆ ಮತ್ತು ಪರೀಕ್ಷಾ ವ್ಯವಸ್ಥೆಯನ್ನು ಕಲ್ಪಿಸುವ ಮೂಲಕ ಉನ್ನತ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವ 1956ರ ‘ವಿಶ್ವವಿದ್ಯಾನಿಲಯಗಳ ಅನುದಾನ ಆಯೋಗ’(ಯುಜಿಸಿ)ಯನ್ನು ರದ್ದುಗೊಳಿಸಿ Higher education commition of India Bill 2018 2018 ಅನ್ನು ಜಾರಿ ಮಾಡಲು ಕೇಂದ್ರ ಸರ್ಕಾರ ಮುಂದಾಗಿರುವುದು ಆತಂಕಾರಿಯಾಗಿದೆ ಎಂದು ಆರೋಪಿಸಿದರು.
ವಿಶ್ವವಿದ್ಯಾನಿಲಯ ವ್ಯಾಪ್ತಿಯಲ್ಲಿ ಬರುವಂತಹ ಪದವಿ ಕಾಲೇಜುಗಳ ಮೌಲ್ಯಮಾನಪನದೊಳಗಿನ ಸಮಸ್ಯೆಗಳು, ಹಾಸ್ಟಲ್ಗಳ ಸಮಸ್ಯೆಗಳು, ಪ್ರಾಯೋಗಿಕ ತರಗತಿಗಳಿಲ್ಲದ ವ್ಯವಸ್ಥೆಯಂತಹ ವಿದ್ಯಾರ್ಥಿಗಳು ಎದುರಿಸುತ್ತಿರುವ ಹಲವಾರು ಸಮಸ್ಯೆಗಳಿದ್ದು, ಸಮಸ್ಯೆಗಳನ್ನು ಸರಿಪಡಿಸದೆ ಉತ್ತಮ ಗುಣಮಟ್ಟದ ಉತ್ತನ್ನ ಶಿಕ್ಷಣ ಸಾಧ್ಯವಾಗುವುದಿಲ್ಲ. ಭಾರತಕ್ಕಿಂತ ಹಿಂದುಳಿದ ದೇಶಗಳಲ್ಲಿ ವಿದ್ಯಾರ್ಥಿಗಳು ಹಾಗೂ ಅವರು ಬೆಳೆಯುತ್ತಿರುವ ರೀತಿಗಳು ಎಷ್ಟು ಗುಣಮಟ್ಟದ್ದಾಗಿದೆ ಎಂಬುದು ವರದಿಯಾಗುತ್ತಿವೆ. ನಾವೆಲ್ಲರೂ ಭಾರತದ ಶಿಕ್ಷಣದ ಗುಣಮಟ್ಟವನ್ನ ಜಗತ್ತಿನ ಮಟ್ಟದಲ್ಲಿ ಉನ್ನತ ಮಟ್ಟಕ್ಕೆ ಕೊಂಡೊಯ್ಯಲು ಬಯಸುತ್ತುರುವ ಸಂದರ್ಭದಲ್ಲಿ ಯುಜಿಸಿಯನ್ನೇ ಕಿತ್ತುಹಾಕಲು ಹೊರಟಿರುವಾಗಲೂ ಕರ್ನಾಟಕದ ಉನ್ನತ ಶಿಕ್ಷಣದ ಹಕ್ಕುಬಾಧ್ಯರು ಮೌನ ವಹಿಸಿರುವುದು ಆಘಾತಕಾರಿಯಾಗಿದೆ ಎಂದು ಆರೋಪಿಸಿದರು.
ಗುಣಮಟ್ಟದ ಶಿಕ್ಷಣಕ್ಕಾಗಿ ವಿವಿಯ ವ್ಯಾಪ್ತಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ತುಂಬಲು ಬೇಕಿರುವ ಆಡಳಿತಾತ್ಮಕ ಪ್ರಕ್ರಿಯೆಗೆ ಚಾಲನೆ ನೀಡಿ, ಶೀಘ್ರವಾಗಿ ಹುದ್ದೆಗಳನ್ನು ಭರ್ತಿಮಾಡಬೇಕು. ವಿವಿಯ ವ್ಯಾಪ್ತಿಯಲ್ಲಿರುವ ಹಾಸ್ಟಲ್ಗಳ ಸಮಸ್ಯೆಯನ್ನು ಚರ್ಚಿಸಿ ಬಗೆಹರಿಸಲು ವಿದ್ಯಾರ್ಥಿ ಪ್ರತಿನಿಧಿಗಳನ್ನೊಳಗೊಂಡ ಸಭೆ ಕರೆಯಬೇಕು ಯುಜಿಸಿಯನ್ನು ರದ್ದುಗೊಳಿಸುವ ಕ್ರಮವನ್ನು ಒಪ್ಪುವುದಿಲ್ಲ ಎಂದು ಸಾರ್ವಜನಿಕವಗಿಯೂ ಹಾಗೂ ಲಿಖಿತ ರೂಪದಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಗಮನಕ್ಕೆ ತರಬೇಕೆಂದು ಆಗ್ರಹಿಸಿದರು.
ಕರ್ನಾಟಕ ಜನಶಕ್ತಿ ಮತ್ತು ವಿದ್ಯಾರ್ಥಿ ಸಂಘಟನೆಯ ಆದಿಲ್ ಖಾನ್, ಸಬ್ರೀನ್, ಎ.ಐ.ಎಸ್.ಎಫ್ ನ ರಮೇಶ್ ನಾಯ್ಕ್ ಮತ್ತಿತರರು ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
