ಕಲೆ, ವಿಜ್ಞಾನ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ

ಹರಿಹರ:

         ಮಕ್ಕಳ ಕಲಿಕೆಯಲ್ಲಿ ಕಲೆ ಮತ್ತು ವಿಜ್ಞಾನ ವಿಷಯಗಳು ಅವರ ಭವಿಷ್ವನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಾಹಿಸುತ್ತವೆ ಎಂದು ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ಪೀಠಾಧ್ಯಕ್ಷರಾದ ಶ್ರೀ ನಿರಂಜನಾನಂದ ಪುರಿ ಶ್ರೀಗಳು ಮಕ್ಕಳಿಗೆ ಆಶೀರ್ವಚನ ನೀಡಿದರು.
ತಾಲೂಕಿನ ಬೆಳ್ಳೂಡಿ ಗ್ರಾಮದ ಹೊರವಲಯದಲ್ಲಿರುವ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ, ಶಾಖಾ ಮಠ ಬೆಳ್ಳೂಡಿ ಇದರ ಆಶ್ರಯದಲ್ಲಿರುವ ಚಂದ್ರಗುಪ್ತ ಮೌರ್ಯ ಪಬ್ಲಿಕ್ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಕಲೆ, ವಿಜ್ಞಾನ ವಸ್ತು ಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

        ಪ್ರಸ್ತುತ ದಿನಮಾನದಲ್ಲಿ ಮಕ್ಕಳಿಗೆ ಶಿಕ್ಷರು ಅನೇಕ ವಿಷಯಗಳನ್ನು ಬೋಧಿಸುತ್ತಿದ್ದಾರೆ, ಆದರೆ ಅವುಗಳಲ್ಲಿ ಕಲೆ ಮತ್ತು ವಿಜ್ಞಾನ ವಿಷಯಗಳು ಮಕ್ಕಳ ಭವಿಷ್ಯವನ್ನು ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿವೆ. ಆ ಕಾರಣದಿಂದ ಮಕ್ಕಳಲ್ಲಿ ಕಲೆ ಮತ್ತು ವಿಜ್ಞಾನಗಳ ಬಗ್ಗೆ ಹೆಚ್ಚಿನ ಅರಿವು ಮೂಡಿಸುವ ಉದ್ದೇಶದಿಂದ ನಮ್ಮ ಸಂಸ್ಥೆಯಲ್ಲಿ ಪ್ರಥಮ ಬಾರಿಗೆ ಅತ್ಯುತ್ತಮವಾಗಿ ಕಲೆ, ವಿಜ್ಞಾನ ವಸ್ತು ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ ಎಂದು ನುಡಿದರು.

         ಶಾಲೆ ಪ್ರಾರಂಭವಾದ ಮೇಲೆ ಪ್ರಥಮ ಬಾರಿಗೆ ಈ ವಸ್ತು ಪ್ರದರ್ಶನವನ್ನು ಹಮ್ಮಿಕೊಂಡಿದ್ದರೂ ಸಹ ನಮ್ಮ ನಿರೀಕ್ಷೆಗೂ ಮೀರಿ ಮಕ್ಕಳು ಹಾಗೂ ಶಿಕ್ಷಕರು ಸೇರಿ ಅತ್ಯುತ್ತಮ ವಿಜ್ಞಾನ ಪ್ರದರ್ಶನವನ್ನು ರಚಿಸಿದ್ದಾರೆ. ಇಂದು ಜಗತ್ತು ನಾಗಾಲೋಟದಿಂದ ಓಡುತ್ತಿದೆ, ಅದಕ್ಕೆ ತಕ್ಕಂತೆ ನಾವು ಓಡಬೇಕಾಗಿದೆ. ಮಕ್ಕಳಲ್ಲಿ ಕಲೆ, ಸಾಹಿತ್ಯ, ಕ್ರೀಡೆ, ವಿಜ್ಞಾನ, ಸಾಮಾಜಿಕ ಕಳಕಳಿಯ ವಿಷಯವನ್ನು ತುಂಬುವುದರಿಂದ ಮಕ್ಕಳು ಉತ್ತಮ ಪ್ರಜೆಗಳಾಗಿ ಬೆಳೆಯುತ್ತಾರೆ ಎಂದು ಹೇಳಿದರು.

         ಶಾಲೆಯ ಕಾರ್ಯದರ್ಶಿಗಳಾದ ನಿಂಗಪ್ಪ ಅವರು ಮಾತನಾಡಿ, ಈ ವಸ್ತು ಪ್ರದರ್ಶನ ಇಷ್ಟೊಂದು ಚನ್ನಾಗಿ ಮೂಡಿ ಬರಲು ನಮ್ಮ ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕರು, ಶಿಕ್ಷಕಿಯರು ಹಾಗೂ ಶಾಲೆಯ ಸಿಬ್ಬಂದಿಗಳ ಪಾತ್ರ ಪ್ರಮುಖವಾಗಿದೆ. ವಸ್ತು ಪ್ರದರ್ಶನ ಮಾಡುವ ಉದ್ದೇಶ ಮಕ್ಕಳಲ್ಲಿ ಹೊಸ ಹೊಸ ಆಲೋಚನೆ ಹಾಗೂ ನೂತನ ತಂತ್ರಜ್ಞಾನಗಳ ಅರಿವು ಮತ್ತು ಮಾಹಿತಿ ನೀಡಿ, ಉತ್ತಮ ಸಂದೇಶವನ್ನು ಮೈಗೂಡಿಸಿಕೊಳ್ಳುವುದಾಗಿದೆ ಎಂದು ತಿಳಿಸಿದರು.

        ಕಲೆ ಮತ್ತು ವಿಜ್ಞಾನ ವಸ್ತು ಪ್ರದರ್ಶನದ ಸದುಉಪಯೋಗವನ್ನು ತಾಲೂಕಿನ ಅನೇಕ ಸರ್ಕಾರಿ ಮತ್ತು ಖಾಸಸಗಿ ಶಾಲೆಗಳ ಮಕ್ಕಳು ಪಡೆದುಕೊಂಡರು.  ಈ ವೇಳೆ ಶಾಲೆಯ ಮುಖ್ಯೋಪಾಧ್ಯಾಯರಾದ ಶೃತಿ ಇನಾಂದರ್, ಶಾಲೆಯ ಎಲ್ಲಾ ಶಿಕ್ಷಕ-ಶಿಕ್ಷಕಿಯರು, ಹಾಗೂ ಶಾಲೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link