ಡಿ.30ಕ್ಕೆ ಸಾಮೂಹಿಕ ವಿವಾಹ ಮಹೋತ್ಸವ

ದಾವಣಗೆರೆ:

         ಶ್ರೀಗುರು ರಾಮದಾಸಸ್ವಾಮಿ ಆಧ್ಯಾತ್ಮಿಕ ಸೇವಾ ಟ್ರಸ್ಟ್ ವತಿಯಿಂದ ಶ್ರೀಮಾದಾರ ಚನ್ನಯ್ಯ ಸ್ವಾಮೀಜಿ ಹಾಗೂ ಶ್ರೀಗುರು ರಾಮದಾಸ ಸ್ವಾಮಿ ಅವರ ಜಯಂತ್ಯೋತ್ಸವದ ಪ್ರಯುಕ್ತ, ಇಲ್ಲಿನ ಗಾಂಧಿ ನಗರದಲ್ಲಿ ಡಿ.30ರಂದು 29ನೇ ವರ್ಷದ ಸಾಮೂಹಿಕ ವಿವಾಹ ಮಹೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್‍ನ ಅಧ್ಯಕ್ಷ ಬಿ.ಹೆಚ್.ವೀರಭದ್ರಪ್ಪ ತಿಳಿಸಿದರು.

        ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 11.30ಕ್ಕೆ ನಡೆಯುವ ಕಾರ್ಯಕ್ರಮದ ಸಾನಿಧ್ಯವನ್ನು ಶ್ರೀಗುರು ಮಾದಾರ ಚನ್ನಯ್ಯ ಸ್ವಾಮೀಜಿ, ವಿರಕ್ತಮಠದ ಶ್ರೀಬಸವಪ್ರಭು ಸ್ವಾಮೀಜಿ, ಕೋಡಿಹಳ್ಳಿ ಆದಿಜಾಂಭವ ಪೀಠದ ಶ್ರೀಷಡಾಕ್ಷರಿಮುನಿ ಸ್ವಾಮೀಜಿ, ಶ್ರೀಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ವಹಿಸಿಕೊಳ್ಳಲಿದ್ದಾರೆ. ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆ ವಹಿಸುವರು. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಕೃಷಿ ಸಚಿವ ಶಿವಶಂಕರ್‍ರೆಡ್ಡಿ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಆರ್.ಶ್ರೀನಿವಾಸ್, ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಮತ್ತಿತರರು ಭಾಗವಹಿಸಲಿದ್ದಾರೆಂದು ಹೇಳಿದರು.

       ಇದೇ ಸಂದರ್ಭದಲ್ಲಿ ಪರಿಶಿಷ್ಟ ಜಾತಿಯ ಸಚಿವರು, ಶಾಸಕರುಗಳಿಗೆ, ಸಮಾಜ ಸೇವಕರಿಗೆ ಸನ್ಮಾನಿಸಿ ಗೌರವಿಸಲಾಗುವುದು. ಈ ವರೆಗೂ ನಮ್ಮ ಟ್ರಸ್ಟ್‍ನಿಂದ 1370 ಜೋಡಿಗಳಿಗೆ ವಿವಾಹ ಮಾಡಿಸಲಾಗಿದ್ದು, ಈ ಬಾರಿ 25 ಜೋಡಿಗಳಿಗೆ ಮದುವೆ ಮಾಡಿಸಲಾಗುವುದು. ವಧುವಿಗೆ ತಾಳಿ, ಕಾಲುಂಗುರ, ವಧು-ವರರಿಗೆ ಬಟ್ಟೆ ಹಾಗೂ ಮದುವೆಗೆ ಆಗಮಿಸುವ ಸಂಬಂಧಿಕರಿಗೆ ಊಟದ ವ್ಯವಸ್ಥೆ ಮಾಡಲಾಗುವುದು ಎಂದು ಮಾಹಿತಿ ನೀಡಿದರು.

     ಸುದ್ದಿಗೋಷ್ಠಿಯಲ್ಲಿ ಟ್ರಸ್ಟ್‍ನ ಬಿ.ಎಂ.ಈಶ್ವರಪ್ಪ, ಉಪಾಧ್ಯಕ್ಷ ಬೆಳ್ಳೂಡಿ ದುಗ್ಗಪ್ಪ, ನೀಲಕಂಠಪ್ಪ, ಎಂ.ಹುಚ್ಚೆಂಗಪ್ಪ, ಖಜಾಂಚಿ ರಾಮಸ್ವಾಮಿ, ಗಿರೀಶ್ ಮತ್ತಿತರರು ಹಾಜರಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link