ಚಾಮರಾಜನಗರ: 
ಸಮ್ಮಿಶ್ರ ಸರ್ಕಾರವನ್ನು ಬೀಳಿಸಲು ಬಿಜೆಪಿ ಬೇಡ. ಸಚಿವ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಸಾಕು ಎಂದು ಮಾಜಿ ಡಿಸಿಎಂ ಆರ್.ಅಶೋಕ್ ಹೇಳಿದ್ದಾರೆ.
ಕೊಳ್ಳೇಗಾಲದಲ್ಲಿ ಮಾತನಾಡಿ, ಸಿದ್ದರಾಮಯ್ಯ ಸಿಎಂ ಆಗಬೇಕು ಎಂಬುದು ಕಾಂಗ್ರೆಸಿಗರ ಆಸೆ. ಆದರೆ, ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಇಲ್ಲದಿದ್ದಾಗ ಈ ಮಾಹಿತಿ ಸ್ಫೋಟವಾಗತ್ತೆ ಎಂದರು.
ನೆರೆ ಪರಿಹಾರಕ್ಕೆ ಕೇಂದ್ರ ಸರ್ಕಾರ 500 ಕೋಟಿಗೂ ಹೆಚ್ಚು ಹಣ ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ಯಾವುದೇ ಬರ ಪರಿಹಾರ ಕಾಮಗಾರಿ ಕೈಗೊಂಡಿಲ್ಲ. ಈ ಹಣದಲ್ಲಿ ಒಂದೇ ಒಂದು ಮನೆಯನ್ನು ನಿರ್ಮಿಸಿಕೊಟ್ಟಿಲ್ಲ. ಕೇಂದ್ರ ಸರ್ಕಾರದ ಮೇಲೆ ಆಪಾದನೆಯ ಚಾಳಿ ಬೆಳೆಸಿಕೊಂಡಿದೆ ಎಂದು ಆರೋಪಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








