ಕಾಂಗ್ರೆಸ್ ಪಕ್ಷದ ಕಾರ್ಯಕರ್ತರನ್ನು ಸಂಘಟಿಸುವ ಕೆಲಸ ಪ್ರಾಮಾಣಿಕವಾಗಿ ನಡೆಯಬೇಕು

ಶಿರಾ

           ಕಾರ್ಯಕರ್ತರಲ್ಲಿ ಉತ್ಸಹ ತುಂಬಿ, ಕಾಂಗ್ರೆಸ್ ಪಕ್ಷದ ಸಂಘಟನೆಗೆ ಹೆಚ್ಚು ಒತ್ತು ನೀಡುವ ಮೂಲಕ ಪಕ್ಷದ ಶಕ್ತಿ ಹೆಚ್ಚಿಸುವ ನಿಟ್ಟಿನಲ್ಲಿ ಸಾಮಾನ್ಯ ಕಾರ್ಯಕರ್ತನಾಗಿ ಸೇವೆ ಮಾಡುವೆ ಎಂದು ನೂತನ ಶಿರಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮತ್ತು ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಪಿ.ಆರ್.ಮಂಜುನಾಥ್ ಹೇಳಿದರು.

           ಶಿರಾ ತಾಲ್ಲೂಕಿನ ಪಟ್ಟನಾಯಕನಹಳ್ಳಿ, ಯಂಜಲಗೆರೆ, ಹೊಸಹಳ್ಳಿ, ಹಂದಿಕುಂಟೆ, ರಾಗಲಹಳ್ಳಿ, ಹೆಂದೊರೆ ಸೇರಿದಂತೆ ಹಲವಾರು ಹಳ್ಳಿಗಳ ನೂರಾರು ಕಾಂಗ್ರೆಸ್ ಕಾರ್ಯಕರ್ತರಿಂದ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.

            ಮಾಜಿ ಸಚಿವ ಟಿ.ಬಿ.ಜಯಚಂದ್ರ ಮತ್ತು ಮಾಜಿ ಶಾಸಕ ದಿವಂಗತ ಪಿ.ಎಂ.ರಂಗನಾಥಪ್ಪನವರ ಸೇವೆಯನ್ನು ಆದರ್ಶವಾಗಿಟ್ಟುಕೊಂಡು, ಈ ಹಿಂದೆ ಕಾಂಗ್ರೆಸ್ ಸರ್ಕಾರ ಕೈಗೊಂಡ ಜನಪರ ಯೋಜನೆಗಳ ಬಗ್ಗೆ ಪರಿಣಾಮಕಾರಿಯಾಗಿ ಪ್ರಚಾರ ಮಾಡಿ ಕಾಂಗ್ರೆಸ್ ಪಕ್ಷದ ಶಕ್ತಿ ಹೆಚ್ಚಿಸುವಂತಹ ಗುರಿ ಹೊಂದಲಾಗಿದೆ. ಅತಿ ಶೀಘ್ರದಲ್ಲಿಯೇ ಬರಲಿರುವ ನಗರಸಭೆ ಚುನಾವಣೆಗೆ ಸಜ್ಜಾಗುವ ನಿಟ್ಟಿನಲ್ಲಿ ವಾರ್ಡ್‍ಗಳಲ್ಲಿ ಕೆಳಹಂತದ ಕಾರ್ಯಕರ್ತರು, ಮುಖಂಡರೊಂದಿಗೆ ಪಕ್ಷ ಸಂಘಟನೆ ಮಾಡಿ ನಗರಸಭೆ ಆಡಳಿತವನ್ನು ಕಾಂಗ್ರೆಸ್ ಪಕ್ಷ ಪಡೆಯುವಂತೆ ಮಾಡುವ ನಿಟ್ಟಿನಲ್ಲಿ ನಿರಂತರವಾಗಿ ಶ್ರಮಿಸುತ್ತೇನೆ ಎಂದರು.

           ಶಿರಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಜವಾಬ್ದಾರಿ ನಿಭಾಯಿಸಿ ಪಕ್ಷ ಬಲಪಡಿಸುವ ಉದ್ದೇಶದೊಂದಿಗೆ ತಮ್ಮೊಂದಿಗೆ ಎಲ್ಲಾ ಕಾರ್ಯಕರ್ತರು ಕೈಜೋಡಿಸಿ ಮುನ್ನಡೆಸಿದಾಗ ಶಿರಾ ತಾಲ್ಲೂಕು ಮತ್ತೆ ಕಾಂಗ್ರೆಸ್ ಭದ್ರಕೋಟೆಯಾಗಲು ಸಾಧ್ಯವೆಂದರು.

           ಶಿರಾ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಲ್.ರಾಮಚಂದ್ರಪ್ಪ, ಕೊರಟಗೆರೆ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಶೈಲಜಾ, ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ಯುವ ಕಾಂಗ್ರೆಸ್ ಅಧ್ಯಕ್ಷ ದಿವಾಕರಗೌಡ, ಪ್ರಧಾನ ಕಾರ್ಯದರ್ಶಿ ಹನುಮಂತೇಗೌಡ, ಮುಖಂಡರಾದ ಹೆಚ್.ಎಲ್.ರಂಗನಾಥ್, ಗೋಣಿಹಳ್ಳಿ ದೇವರಾಜು, ಎಂ.ಬಿ.ಉಮೇಶ್, ಭಾನುಪ್ರಕಾಶ್, ರಾಮೇಗೌಡ, ಈರಣ್ಣ, ಹೊಸ್ಮನೆ ರಂಗನಾಥ್, ಯಾದವ ಮುಖಂಡ ಪಾಂಡುರಂಗಪ್ಪ, ಅಶೋಕ್, ರಾಕೇಶ್‍ಬಾಬು, ಗಜಮಾರನಹಳ್ಳಿ ಮಂಜುನಾಥ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap