ನವದೆಹಲಿ: 

ಸದ್ಯ ರಾಷ್ಟ್ರದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಪಂಚರಾಜ್ಯಗಳ ಚುನಾವಣೆ ಮುಗಿದ ನಂತರ ಈಗ ಚುನಾವಣೋತ್ತರ ಸಮೀಕ್ಷೆಗಳ ಸರದಿ ಕಾಂಗ್ರೇಸ್ ನಾಯಕರು ಈಗ ಅದನ್ನೆ ಇಟ್ಟುಕೊಂಡು ಪ್ರಧಾನಮಂತ್ರಿ ನರೇಂದ್ರ ಮೋದಿಯನ್ನು ಟೀಕಿಸಲು ನಿಂತಿದ್ದಾರೆ ಸೋಲಿನ ಭಯದಲ್ಲಿ ಕೇಂದ್ರ ಸರ್ಕಾರ ತಮ್ಮ ಅಧಿನಾಯಿಕಿ ಸೋನಿಯಾರ ಅಳಿಯನ ಮೇಲೆ ಜಾರಿ ನಿರ್ದೇಶನಾಲಯದಿಂದ ದಾಳಿ ನಡೆಸಿದೆ ಎಂದು ಹೇಳುವ ಮೂಲಕ ಮೋದಿಯನ್ನು ಟೀಕಿಸಿದೆ.
ನಿನ್ನೆಯಷ್ಟೇ ಅಹ್ಮದ್ ಪಟೇಲ್, ರಂದೀಪ್ ಸುರ್ಜೇವಾಲಾ ಹಾಗೂ ಕಪಿಲ್ ಸಿಬಲ್ ಅವರು ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕಪಿಲ್ ಸಿಬಲ್ ಮಾತನಾಡಿ ಚುನಾವಣೋತ್ತರ ಸಮೀಕ್ಷೆಯಿಂದ ಬಿಜೆಪಿಗೆ ಸೋಲಿನ ಭಯ ಕಾಡಿದೆ ಎಂದು ಹೇಳಿದ್ದಾರೆ ಇದರಿಂದ ವಿರೋಧ ಪಕ್ಷಗಳಿಗೆ ಕಿರುಕುಳ ನೀಡುಲು ಕೇಂದ್ರೀಯ ತನಿಖಾ ಸಂಸ್ಥೆಗಳಿಗೆ ಸೂಚಿಸಿದೆ ಎಂದು ಆರೋಪಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








