ಹುಬ್ಬಳ್ಳಿ:
ಕೌಟುಂಬಿಕ ಕಲಹದಿಂದ ಬೇಸತ್ತು ಹೆತ್ತ ಮಕ್ಕಳನ್ನು ತಾಯಿಯೇ ಕತ್ತು ಹಿಸುಕಿ ಕೊಂದಿರುವ ಹೃದಯ ವಿದ್ರಾವಕ ಘಟನೆ ಹುಬ್ಬಳ್ಳಿಯ ಆಯೋಧ್ಯ ನಗರದಲ್ಲಿ ನಡೆದಿದೆ.
ರೋಹಿತ್ (6) ಮತ್ತು ರೋಹಿಣಿ (4) ತಾಯಿಯಿಂದಲೇ ಕೊಲೆಯಾದ ದುರ್ದೈವಿ ಮಕ್ಕಳು. ಆರೋಪಿ ತಾಯಿ ಪ್ರೇಮಾ ಪರುಶುರಾಮ ಹುಲಕೋಟಿ ಇಬ್ಬರು ಮಕ್ಕಳನ್ನು ವೇಲ್ ನಿಂದ ಕತ್ತು ಹಿಸುಕಿ ಕೊಲೆ ಮಾಡಿದ್ದಾಳೆ.
ಕೊಲೆಗೆ ಕಾರಣ ನೀಡಿದ ತಾಯಿ:
ಪತಿ ಪರಶುರಾಮ್ ಗಾರೆ ಕೆಲಸ ಮಾಡುತ್ತಿದ್ದು, ಇತ್ತೀಚೆಗೆ ಕುಡಿತದ ಚಟಕ್ಕೆ ದಾಸನಾಗಿದ್ದನು. ಹೀಗಾಗಿ ಸಾಕಷ್ಟು ಸಾಲ ಮಾಡಿಕೊಂಡಿದ್ದು, ಮಕ್ಕಳನ್ನು ಸಾಕಲು, ಮನೆಯ ನಿರ್ವಹಣೆ ಮಾಡಲು ಕೂಡ ಹಣ ಕೊಡುತ್ತಿರಲಿಲ್ಲ. ಹೀಗಾಗಿ ಮಕ್ಕಳು ತಮಗೆ ಹೊರೆಯಾಗಿದ್ದಾರೆ ಎಂದು ತಿಳಿದು ತಾಯಿ ಮಕ್ಕಳ ಕುತ್ತು ಹಿಸುಕಿ ಕೊಲೆ ಮಾಡಿದ್ದಾಳೆ. ಪತಿ ಪರಶುರಾಮ ಕೆಲಸಕ್ಕೆ ಹೋದಾಗ ಕತ್ತುಹಿಸುಕಿ ಕೊಂದಿರುವುದಾಗಿ ತಾಯಿ ತಪ್ಪೊಪ್ಪಿಕೊಂಡಿದ್ದಾಳೆ.
ಅನೈತಿಕ ಸಂಬಂಧ :
ಆರೋಪಿ ತಾಯಿ ಪ್ರೇಮಾ ಪರ ಪುರುಷನೊಂದಿಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಳು. ಗಂಡ ಕೆಲಸಕ್ಕೆ ಹೋದಾಗ ಪರ ಪುರುಷ ಮನೆಗೆ ಬಂದು ಹೋಗುತ್ತಿದ್ದನು. ಆಗ ಅವರಿಬ್ಬರ ಅನೈತಿಕ ಸಂಬಂಧಕ್ಕೆ ಮಕ್ಕಳು ಅಡ್ಡಿಯಾಗುತ್ತಿದ್ದರು. ಆದ್ದರಿಂದ ಪ್ರಿಯಕರನ ಜೊತೆ ಸೇರಿ ಮಕ್ಕಳನ್ನೇ ಕೊಲೆ ಮಾಡಿದ್ದಾಳೆ ಎಂದು ನೆರೆಹೊರೆಯವರು ಹೇಳಿದ್ದಾರೆ.
ಸ್ಥಳಕ್ಕೆ ಹಳೇ ಹುಬ್ಬಳ್ಳಿ ಪೊಲೀಸರು ಭೇಟಿ ನೀಡಿ ಪರೀಶಿಲನೆ ನಡೆಸಿ, ಆರೋಪಿ ತಾಯಿ ಮತ್ತು ಪತಿ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2018/12/HBL-Murder-e1544609378955.gif)