ಗಾಂಧೀಜಿ ಜೀವನ ಸಾಧನೆ ಸಾರುವ ಸ್ತಬ್ದಚಿತ್ರಕ್ಕೆ ಹರಪನಹಳ್ಳಿಯಲ್ಲಿ ಅದ್ದೂರಿ ಸ್ವಾಗತ

ದಾವಣಗೆರೆ 

       ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 150ನೇ ಜನ್ಮ ವರ್ಷಾಚರಣೆ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಸಿದ್ದಪಡಿಸಿರುವ ಗಾಂಧಿಯವರ ಜೀವನ ಸಾಧನೆಯ ವಿವಿಧ ಘಟ್ಟಗಳನ್ನು ಗುರುತಿಸುವ ವಿನೂತನ ಗಾಂಧಿ ಸ್ತಬ್ದ ಚಿತ್ರ ವಾಹನವು ಇಂದು ಮಧ್ಯಾಹ್ನ 2 ಗಂಟೆಗೆ ಹರಪನಹಳ್ಳಿ ತಾಲ್ಲೂಕು ಕಚೇರಿ ಆವರಣಕ್ಕೆ ಆಗಮಿಸಿದ್ದು ಉಪವಿಭಾಗಾಧಿಕಾರಿ ರಾಹುಲ್ ತುಕಾರಾಂ ಪಾಂಡ್ವೆ ಪುಷ್ಪಮಾಲೆ ಅರ್ಪಿಸುವ ಮೂಲಕ ಸ್ವಾಗತಿಸಿದರು.

      ಗಾಂಧೀ-150 ಅಭಿಯಾನ ಕಾರ್ಯಕ್ರಮಕ್ಕೆ ಮಾನ್ಯ ಮುಖ್ಯ ಮಂತ್ರಿಗಳು ಅಕ್ಟೋಬರ್ 2 ರಂದು ಬೆಂಗಳೂರಿನಲ್ಲಿ ಚಾಲನೆ ನೀಡಿದ್ದು, ಉದ್ಘಾಟನೆಗೊಂಡಿರುವ 2 ಸ್ತಬ್ದ ಚಿತ್ರಗಳು ‘ಸತ್ಯ ಮಾರ್ಗ’ ಹಾಗೂ ‘ಶಾಂತಿ ಮಾರ್ಗ’ ಎಂಬ ಎರಡು ಮಾರ್ಗಗಳಲ್ಲಿ ಚಲಿಸುತ್ತಿವೆ. ಶಾಂತಿ ಮಾರ್ಗ ವಾಹನವು ಬೆಂಗಳೂರು, ಮುಳಬಾಗಿಲು, ಬಾಗೆಪಲ್ಲಿ, ಕೊರಟಗೆರೆ, ಪಾವಗಡ, ಮೊಳಕಾಲ್ಮೂರು ಮೂಲಕ ದಾವಣಗೆರೆ ಜಿಲ್ಲೆಯ ಹರಪನಹಳ್ಳಿಗೆ ಇಂದು ಆಗಮಿಸಿದ್ದು, ಹರಪನಹಳ್ಳಿಯಲ್ಲಿ ಅದ್ದೂರಿಯಾಗಿ ಸ್ವಾಗತಿಸಲಾಯಿತು.

        ಈ ಸಂದರ್ಭದಲ್ಲಿ ವಾರ್ತಾಧಿಕಾರಿ ಅಶೋಕ್‍ಕುಮಾರ್ ಮಾತನಾಡಿ, ಈಗಾಗಲೇ ಮೊದಲ ಹಂತದ ಅಭಿಯಾನ ಜಿಲ್ಲೆಯ 4 ತಾಲ್ಲೂಕುಗಳಲ್ಲಿ ಸಂಚರಿಸಿದ್ದು, 2ನೇ ಹಂತದಲ್ಲಿ ಹರಪನಹಳ್ಳಿ ಹಾಗೂ ಹೊನ್ನಾಳಿ ತಾಲ್ಲೂಕುಗಳಲ್ಲಿ ಸಂಚರಿಸಲಿದೆ. ಗಾಂಧೀಜಿಯವರ ಜೀವನ ಸಂದೇಶ ಸಾರುವ ಈ ಸ್ತಬ್ಧಚಿತ್ರವು ಸಾಗುವ ಮಾರ್ಗದಲ್ಲಿ ಸಿಗುವ ಶಾಲಾ-ಕಾಲೇಜು, ಸಂಘ-ಸಂಸ್ಥೆಗಳಲ್ಲಿ ಅಹಿಂಸೆ, ಸತ್ಯಾಗ್ರಹ, ಸಮಾನತೆ, ಖಾದಿ ಗ್ರಾಮೋದ್ಯೋಗ, ಸ್ವಚ್ಚತೆ, ಶಿಕ್ಷಣ, ಮಹಿಳಾ ಉನ್ನತಿ ಮುಂತಾದ ವಿಷಯಗಳ ಬಗ್ಗೆ ಜಾಗೃತಿ ಮೂಡಿಸಲಿದೆ. ಈಗಾಗಲೇ 102 ತಾಲ್ಲೂಕುಗಳಲ್ಲಿ ಸ್ತಬ್ದಚಿತ್ರ ಸಂಚರಿಸಿದ್ದು, 2ನೇ ಹಂತದಲ್ಲಿ 72 ತಾಲ್ಲೂಕುಗಳಲ್ಲಿ ಸಂಚಾರ ನಡೆಸಲಿದೆ ಎಂದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಎಸ್.ರವಿ, ತಾಲ್ಲೂಕು ಕಚೇರಿ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಇದ್ದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link