ಮಧುಗಿರಿ:
ಸೈನಿಕರು ತಮ್ಮ ಪ್ರಾಣವನ್ನು ಲೆಕ್ಕಿಸದೆ ದೇಶದ ರಕ್ಷಣೆಯಲ್ಲಿ ತೊಡಗಿರುವುದು ಶ್ಲಾಘನೀಯವಾಗಿದ್ದು ಇಂದು ರಾಷ್ಟ್ರದ ಜನ ನೆಮ್ಮದಿಯಿಂದ ಇದ್ದಾರೆ ಎಂದು ತಗ್ಗೀಹಳ್ಳಿ ಶ್ರೀ ರಾಮಕೃಷ್ಣ ಮಠದ ಶ್ರೀ ರಮಾನಂದ ಸ್ವಾಮೀಜಿಯವರು ಅಭಿಪ್ರಾಯ ಪಟ್ಟರು.
ಪಟ್ಟಣದ ಮಾಲೀಮರಿಯಪ್ಪ ರಂಗಮಂದಿರದಲ್ಲಿ ಮಧುಗಿರಿ ತಾಲೂಕು ಮಾಜಿ ಸೈನಿಕರ ಕ್ಷೇಮಾಭಿವೃದ್ದಿ ಸಂಘದ ಉದ್ಘಾಟನ ಸಮಾರಂಭದಲ್ಲಿ ಮಾತನಾಡಿದ ಅವರು ಮಾಜಿ ಸೈನಿಕರ ಕುಟುಂಬಕ್ಕೆ ಸರಕಾರದಿಂದ ತಲುಪಬೇಕಾದ ಅನುದಾನವನ್ನು ಬಿಡುಗಡೆ ಮಾಡಬೇಕು ಮತ್ತು ಸ್ವಾತಂತ್ರ್ಯ ಮತ್ತು ಗಣರಾಜ್ಯ ದಿನಾಚರಣೆಯಂದು ಸೇವೆ ಸಲ್ಲಿಸಿದ ಮಾಜಿ ಸೈನಿಕರಿಗೆ ಕಾರ್ಯಕ್ರಮಗಳಲ್ಲಿ ಪ್ರ್ಯಾತಿನಿಧ್ಯ ನೀಡ ಬೇಕೆಂದರು.
ಶಾಸಕ ಎಂ.ವಿ.ವೀರಭದ್ರಯ್ಯ ಮಾತನಾಡಿ ಮಾಜಿ ಸೈನಿಕರಿಗೆ ಹಾಗೂ ಕುಟುಂಬಕ್ಕೆ ಸರಕಾರದಿಂದ ಸಿಗಬೇಕಾದ ಎಲ್ಲಾ ಸೌಲಭ್ಯಗಳನ್ನು ತಲುಪಿಸುವ ಜವಾಬ್ದಾರಿ ನನ್ನ ಮೇಲೆ ಇದೆ ಹಾಗೂ ಮಾಜಿ ಸೈನಿಕರ ಸಂಘಕ್ಕೆ ಮುಂದಿನ ದಿನಗಳಲ್ಲಿ ನಿವೇಶನ ಹಾಗೂ ಭವನ ನಿರ್ಮಾಣ ಮಾಡಲು ಅನುದಾನ ನೀಡಲಾಗುವ ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ಸ್ವಾಮೀಜಿ ಶ್ರೀನಿವಾಸ್, ಮಂಜುನಾಥಗುಪ್ತ ತಲಾ ಐದು ಸಾವಿರ ರೂಗಳನ್ನು ಹಾಗೂ ಮಾಜಿ ಸೈನಿಕ ಮಹಾಲಿಂಗಪ್ಪ ಒಂದು ಎಕರೆ ಜಮೀನನ್ನು ಮಧುಗಿರಿ ತಾಲೂಕು ಮಾಜಿ ಸೈನಿಕರ ಸಂಘಕ್ಕೆ ದೇಣಿಗೆಯಾಗಿ ನೀಡಿದರು ಹಾಗೂ ಹುತಾತ್ಮ ಸೈನಿಕರ ಕುಟುಂಬದವರಿಗೆ ಸನ್ಮಾನಿಸಲಾಯಿತು.
ಜಿಪಂ ಸದಸ್ಯ ಕೊಂಡವಾಡಿ ತಿಮ್ಮಯ್ಯ, ತಾಪಂ ಅಧ್ಯಕ್ಷೆ ಇಂದಿರಾ ದೇನನಾಯ್ಕ, ಬಿಜೆಪಿ ತಾಲೂಕು ಅಧ್ಯಕ್ಷ ಎಸ್.ಈ.ರಮೇಶರೆಡ್ಡಿ, ಪುರಸಭಾ ಸದಸ್ಯರಾದ ತಿಮ್ಮರಾಯಪ್ಪ, ಮಂಜುನಾಥ, ಎಂ.ಎಲ್.ಗಂಗರಾಜು, ಮಂಜುನಾಥ, ಸಾಹಿತ್ಯ ಪರಿಷತ್ ಅಧ್ಯಕ್ಷ ಸಿದ್ದಗಂಗಪ್ಪ, ಜಿಲ್ಲಾ ಫೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ವೆಂಕಟರಾಮ, ತಾಲ್ಲೂಕು ಫ್ರೌಢಶಾಲಾ ಶಿಕ್ಷಕರ ಸಂಘದ ಆಧ್ಯಕ್ಷ ಮಲ್ಲಿಕಾರ್ಜುನಯ್ಯ, ವೈದ್ಯ ಡಾ. ಸತ್ಯನಾರಾಯಣ್, ಶರಣ ಮುಖಂಡರಾದ ತುಂಗೋಟಿ ರಾಮಣ್ಣ, ಶಫೀಕ್ ಅಹಮದ್ ಮಾಜಿ ಸೈನಿಕರ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷರು ಸಿದ್ದಪ್ಪ.ಕೆ. ಪದಾಧಿಕಾರಿಗಳಾದ ಪ್ರಭಾಕರ್, ಚಿಕ್ಕೀರಯ್ಯ, ಶ್ರೀನಿವಾಸ್, ನಾಗರಾಜು ಹಾಗೂ ಇತರರು ಉಪಸ್ಥಿತರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
