ಲೂಧಿಯಾನ:
ಪಂಜಾಬ್ನ ಲೂಧಿಯಾನದಲ್ಲಿ ಅಕಾಲಿದಳದ ಯುವ ಕಾರ್ಯಕರ್ತರು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಪ್ರತಿಮೆ ವಿರೂಪಗೊಳಿಸಿದ್ದಾರೆ.
ರಾಜೀವ್ ಗಾಂಧಿ ಸಿಖ್ಖರನ್ನು ಕೊಂದಿದ್ದು, ಅವರಿಗೆ ನೀಡಲಾಗಿರುವ ಭಾರತ ರತ್ನವನ್ನು ವಾಪಸ್ ಪಡೆಯಬೇಕೆಂಬ ಆಗ್ರಹವನ್ನೂ ಇವರಿಬ್ಬರು ಮುಂದಿಟ್ಟಿದ್ದಾರೆ.
ರಾಜೀವ್ ಗಾಂಧಿಗೆ ನೀಡಲಾದ ‘ಭಾರತ ರತ್ನ’ ವಾಪಸ್ ಪಡೆಯಬೇಕೆಂಬ ನಿರ್ಣಯ ಅಂಗೀಕರಿಸಲು ಪಂಜಾಬ್ ವಿಧಾನಸಭೆಯ ವಿಶೇಷ ಅಧಿವೇಶನ ಕರೆಯಬೇಕೆಂದು ಶಿರೋಮಣಿ ಅಕಾಲಿ ದಳ ಬೇಡಿಕೆ ಮುಂದಿಟ್ಟ ಮರುದಿನವೇ ಈ ಬೆಳವಣಿಗೆ ನಡೆದಿದೆ.
ರಾಜೀವ್ ಗಾಂಧಿ ಪ್ರತಿಮೆಯನ್ನು ಈ ರೀತಿ ವಿರೂಪಗೊಳಿಸಿದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸುವುದಾಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಗುರುಪ್ರೀತ್ ಗೋಗಿ ಹಾಗೂ ಪಕ್ಷದ ಜಿಲ್ಲಾ ಯುವ ಘಟಕದ ಅಧ್ಯಕ್ಷ ರಾಜೀವ್ ರಾಜಾ ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ