ನಾನು ಅಡಿಗಲ್ಲು ಹಾಕಿದ್ದ ಸೇತುವೆ ಉದ್ಘಾಟನೆಗೆ ನನಗೆ ಆಹ್ವಾನವಿಲ್ಲ : ಗೌಡರ ಗುಟ್ರು..!!

ಬೆಂಗಳೂರು:

   ಬೋಗಿಬಿಲ್ ಸೇತುವೆಯನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಉದ್ಘಾಟಿಸಿದ್ದಾರೆ. ಆದರೆ ‘ನಾನು ಅಡಿಗಲ್ಲು ಹಾಕಿದ್ದ ಸೇತುವೆ ಉದ್ಘಾಟನೆಗೆ ನನಗೆ ಆಹ್ವಾನ ನೀಡಿಲ್ಲ’ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಗುಡುಗಿದ್ದಾರೆ.

  ಬೆಂಗಳೂರಿನ ಜೆ.ಪಿ.ಭವನದಲ್ಲಿ ಮಂಗಳವಾರ ಮಾತನಾಡಿದ ಎಚ್.ಡಿ.ದೇವೇಗೌಡರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಈ ರೀತಿ ಹೇಳಿದ್ದಾರೆ . ‘ಯಾರೊಬ್ಬರು ಕೂಡ ಅಸ್ಸಾಂನಲ್ಲಿ ನಡೆಯುತ್ತಿರುವ ಬೋಗಿಬಿಲ್ ಸೇತುವೆ ಉದ್ಘಾಟನೆ ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ’ ಎಂದರು. ಬೋಗಿಬಿಲ್ ಸೇತುವೆ ಲೋಕಾರ್ಪಣೆ ಮಾಡಿದ ಮೋದಿ ‘ನಾವು ಮಾಡಿದ ಕೆಲಸವನ್ನು ಯಾರು ನೆನಪು ಇಟ್ಟುಕೊಳ್ಳುತ್ತಾರೆ ಎಂದು ಪ್ರಶ್ನಿಸಿದ ದೇವೇಗೌಡರು ಅದು ದೊಡ್ಡ ವಿಷಯವಲ್ಲ ಬಿಡಿ.

   ಕಾಶ್ಮೀರ ರೈಲ್ವೆ, ದೆಹಲಿ ಮೆಟ್ರೋ ಯೋಜನೆಗಳನ್ನು ನಾನೇ ಮಂಜೂರು ಮಾಡಿದ್ದೆ. ನನ್ನ ಕಾಲದಲ್ಲಿಯೇ ಅದಕ್ಕೆ ಹಣ ಬಿಡುಗಡೆ ಮಾಡಿ, ಅಡಿಗಲ್ಲು ಹಾಕಿಸಿದ್ದೆ. ಈಗ ಅದೆಲ್ಲವನ್ನು ಮರೆತಿದ್ದಾರೆ’ ಎಂದು ಹೇಳಿದರು. ‘ಹಾಸನ-ಮೈಸೂರು ಯೋಜನೆಯನ್ನು 13 ತಿಂಗಳಿನಲ್ಲಿ ಪೂರ್ಣಗೊಳಿಸಿದೆ. ನಿಗದಿತ ಸಮಯದಲ್ಲಿ ಸೇತುವೆಯನ್ನು ಪೂರ್ಣಗೊಳಿಸಿದ್ದೇನೆ. ಅವುಗಳಲ್ಲಿ ಅಗನವಾಡಿ ಸೇತುವೆ ಸಹ ಒಂದು. ಮೋದಿ ಅವರು ಆ ಸೇತುವೆಯನ್ನು ನೋಡಿಕೊಂಡು ಬರಲಿ’ ಎಂದು ದೇವೇಗೌಡರು ಮಾತಾಡಿದ್ದಾರೆ.

    ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ

Recent Articles

spot_img

Related Stories

Share via
Copy link