ರೈತರು ಸರ್ಕಾರದ ಸೌಲಭ್ಯವನ್ನು ಸದುಪಯೋಗಿಸಿಕೊಳ್ಳಿ : ಬಿ. ಸತ್ಯನಾರಾಯಣ

ಬರಗೂರು

        ರೈತರು ತಮ್ಮ ಅಭಿವೃದ್ದಿಗಾಗಿ ಸರ್ಕಾರದಿಂದ ಬರುವ ಪ್ರತಿಯೊಂದು ಸೌಲಭ್ಯಗಳನ್ನು ಬಳಸಿಕೊಂಡು ಅಭಿವೃದ್ದಿ ಹೊಂದುವಂತೆ ಶಾಸಕ ಬಿ.ಸತ್ಯನಾರಾಯಣ ರೈತರಿಗೆ ಮಾಹಿತಿ ನೀಡಿದರು.

         ಸಿರಾ ತಾಲ್ಲೂಕು ಬರಗೂರು ಗ್ರಾಮದ ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ಗಡಿನಾಡು ತೋಟಗಾರಿಕೆ ರೈತ ಉತ್ಪಾದಕರ ಕಂಪನಿಯು ಏರ್ಪಡಿಸಿದ್ದ 2017-18 ನೆ ಸಾಲಿನ ಸರ್ವಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

           ಸಕಾಲದಲ್ಲಿ ಮಳೆಯಾಗದೆ ಬೆಳೆ ಕೈಗೆ ಸಿಗದೆ ಕುಡಿಯುವ ನೀರಿಗೂ ಸಹ ಹಾಹಾಕಾರವಾಗುವ ಸ್ಥಿತಿ ಬಂದಿದೆ. ದೈವ ಕೃಪೆ ತೋರಿ ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾಗಲಿ, ಇಂತಹ ಕಂಪನಿಗಳು ಮುಂದೆ ಬಂದು ರೈತರಿಗೆ ಉತೇಜನ ನೀಡುವ ಕೆಲಸಗಳು ಮಾಡುತ್ತಿವೆ. ರೈತರು ಸಹ ಕಂಪನಿಯ ಸೌಲಭ್ಯಗಳನ್ನು ಸದುಪಯೋಗ ಪಡೆಯಬೇಕಿದೆ ಎಂದರು.

          ರೂಪ್‍ವೇ ಕಾರ್ಡ್ ವಿತರಿಸಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಹಂಸವೇಣಿ ಶ್ರೀನಿವಾಸ್ ಮಾತನಾಡಿ, ರೈತರ ಅನುಕೂಲಕ್ಕೆ ಅನುಗುಣವಾಗಿಈ ಕಂಪನಿ ಕೃಷಿ ಚಟುವಟಿಕೆಗಳಿಗೆ ತಯಾರಿಸುವ ಸಾಮಗ್ರಿಗಳನ್ನು ಬಳಕೆ ಮಾಡಲಿ ಎಂದರು.

          ಗಡಿನಾಡು ತೋಟಗಾರಿಕೆ ರೈತ ಉತ್ಪಾದಕರ ಕಂಪನಿಯ ಅಧ್ಯಕ್ಷ ಡಾ. ಬಿ.ಟಿ.ಚಂದ್ರಶೇಖರ್ ಗೌಡ ಅಧ್ಯಕ್ಷತೆ ವಹಿಸಿದ್ದರು. ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಬಿ. ರಘು ಕ್ಯಾಲೆಂಡರ್ ಬಿಡುಗಡೆ ಗೊಳಿಸದರು, ಸಹಾಯಕ ತೋಟಗಾರಿಕೆ ನಿರ್ದೇಶಕ ಪಾಂಡುರಂಗಪ್ಪ, ಬರಗೂರು ವಿಎಸ್‍ಎಸ್‍ಎನ್ ಅಧ್ಯಕ್ಷ ಜಯರಾಮೆಗೌಡ, ನಿರ್ದೇಶಕ ಜಿಎನ್‍ಮೂರ್ತಿ, ಗುತ್ತಿಗೆದಾರ ಬಿ.ಬೋಪಣ್ಣ, ಕಂಪನಿಯ ಮಾಜಿ ಅಧ್ಯಕ್ಷ ಕೃಷ್ಣೆಗೌಡ, ಪಾಂಡುರಂಗೆಗೌಡ, ಪ್ರಾಂಶುಪಾಲ ಡಿಎನ್ ಪರಮೇಶ್ ಗೌಡ, ಸಹಾಯಕ ಕೃಷಿ ನಿರ್ದೇಶಕ ರಂಗನಾಥ್, ಹುಲಿಕುಂಟೆ ಹೋಬಳಿ ಸಹಾಯಕ ತೋಟಗಾರಿಕೆ ನಿರ್ದೇಶಕ ಚಿತ್ತೇಶ್, ಗ್ರಾಪಂ ಅಧ್ಯಕ್ಷೆ ಲಕ್ಷ್ಮೀನರಸಮ್ಮ, ಕಂಪನಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವಣ್ಣ, ಲೆಕ್ಕಾಧಿಕಾರಿ ಭಾರತಿ ಹಾಗೂ ಕಂಪನಿಯ ನಿರ್ದೇಶಕರು ಭಾಗವಹಿಸಿದ್ದರು,

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap