ಕೊಪ್ಪಳ:
ಶ್ರೀ ಸಿದ್ದೇಶ್ವರ ಮಠದ ಸ್ವಾಮೀ ಜಿಯವರು ಪೀಠತ್ಯಾಗ ಮಾಡಿದ್ದು, ಇದೀಗ ಸ್ವಾಮೀಜಿಗಳ ನಡೆ ಭಾರೀ ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.
ಉಜ್ಜಯಿನಿ ಶಾಖಾ ಮಠವಾಗಿರುವ ತಾಲ್ಲೂಕಿನ ಅಳವಂಡಿ ಮರುಳಸಿದ್ಧೇಶ್ವರ ಮಠದ ಪೀಠಾಧಿಪತಿ ಸಿದ್ಧಲಿಂಗ ಸ್ವಾಮೀಜಿ 13ನೇ ವಯಸ್ಸಿನಲ್ಲಿಯೇ ಪೀಠಾಧಿಪತಿಯಾಗಿದ್ದರು. ಮುಂಡರಗಿಯ ಕಾಲೇಜಿನಲ್ಲಿ ಪಾಠವನ್ನೂ ಮಾಡುತ್ತಿದ್ದರು. ಇದೀಗ ಕಾಲೇಜಿಗೆ ಬರುತ್ತಿದ್ದ ತಮ್ಮ ವಿದ್ಯಾರ್ಥಿನಿಯನ್ನೇ ಪ್ರೀತಿಸಿ ಮದುವೆಯಾಗಿದ್ದಾರೆ ಅನ್ನೋ ಮಾತುಗಳು ಕೇಳಿ ಬರುತ್ತಿವೆ.
ಶ್ರೀಗಳು ಪೀಠ ತ್ಯಾಗ ಮಾಡುವಾಗ ಯಾರ ಗಮನಕ್ಕೂ ತಾರದೇ ಭಕ್ತರಲ್ಲಿ ತಮಗಾಗುವ ತೊಂದರೆಗಳ ಬಗ್ಗೆ ಚರ್ಚಿಸಿಲ್ಲ. ಏಕಾಏಕಿ ಪೀಠ ತ್ಯಾಗ ಮಾಡಿರುವುದು ಮತ್ತು ವಿವಾಹವಾಗಿರುವುದು ಮಠದ ಭಕ್ತರಿಗೆ ಮಾಡಿದ ಅಪಮಾನವಾಗಿದೆ ಎಂದು ಅವರು ಗ್ರಾಮದ ಮುಖಂಡರೊಬ್ಬರು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ