ನವದೆಹಲಿ:
ಚುನಾವಣೆ ಹತ್ತಿರ ಬಂದಂತೆ ರೈತ ಸ್ನೇಹಿ ಜನಪ್ರಿಯ ಯೋಜನೆಗಳನ್ನು ಘೋಷಿಸಲು ಮುಂದಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರು ರೈತರನ್ನು ಮೆಚ್ಚಿಸಲು ಕೇಂದ್ರ ಸರ್ಕಾರ ಪ್ರತಿ ಎಕರೆಗೆ 4 ಸಾವಿರ ರೂ. ನೇರ ನಗದು ಘೋಷಣೆ ಮಾಡುವ ಸಾಧ್ಯತೆಯಿದೆ.
ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರೈತರಿಗೆ ಹೆಕ್ಟೇರ್ಗೆ (2.5 ಎಕರೆ) 50 ಸಾವಿರ ರು.ನಂತೆ ಗರಿಷ್ಠ 1 ಲಕ್ಷ ರು.ವರೆಗೆ ಶೂನ್ಯ ಬಡ್ಡಿಯ ಸಾಲ ದೊರಕಲಿದೆ. ಇನ್ನು ಪ್ರತಿ ಎಕರೆಗೆ (ಸೀಸನ್ಗೆ) 4 ಸಾವಿರ ರುಪಾಯಿ ಸಹಾಯಧನವನ್ನು ರೈತರ ಖಾತೆಗೆ ನೇರ ಜಮಾ ಮಾಡುವ ಯೋಜನೆಯೂ ಜಾರಿಗೆ ಬರಲಿದೆ ಎಂದು ಮೂಲಗಳು ಹೇಳಿವೆ.
ನೇರ ನಗದು ವರ್ಗಾವಣೆಯಿಂದ ಕೇಂದ್ರ ಸರ್ಕಾರಕ್ಕೆ 2.3 ಲಕ್ಷ ಕೋಟಿ ರು. ಹೊರೆ ಬೀಳಲಿದೆ. ಇನ್ನು 28ರಿಂದ 30 ಸಾವಿರ ಕೋಟಿ ರು.ನಷ್ಟುಶೂನ್ಯ ಬಡ್ಡಿ ಯೋಜನೆಯಿಂದ ಹೊರೆಯಾಗಲಿದೆ. ಒಟ್ಟಾರೆ ವಾರ್ಷಿಕ 2.3 ಲಕ್ಷ ಕೋಟಿ ರು.ನಷ್ಟುಹೊರೆ ಕೇಂದ್ರ ಸರ್ಕಾರದ ಮೇಲೆ ಬೀಳಲಿದೆ ಎನ್ನಲಾಗಿದೆ.
ಸದ್ಯ ಬೆಳೆ ಸಾಲಕ್ಕೆ ಶೇ. 4 ರ ಬಡ್ಡಿ ವಿಧಿಸಲಾಗುತ್ತಿದೆ. ಆದರೆ ಈ ಹೊಸ ವಿಧದ ಸಾಲಕ್ಕೆ 1 ಲಕ್ಷ ರೂ.ವರೆಗೆ ಬ್ಯಾಂಕ್ಗಳು ಬಡ್ಡಿ ವಿಧಿಸುವಂತಿಲ್ಲ. ಅಲ್ಲದೆ ಎಕರೆಗೆ 50 ಸಾವಿರ ರೂ. ಬಡ್ಡಿ ರಹಿತ ಸಾಲವನ್ನು ನಿಗದಿಪಡಿಸಲಾಗಿದ್ದು, ಅಷ್ಟೇ ಅಲ್ಲ, ಪ್ರತಿ ರೈತರಿಗೆ 1 ಲಕ್ಷ ರೂ. ಬಡ್ಡಿ ರಹಿತ ಸಾಲ ಸೌಲಭ್ಯವನ್ನೂ ಇದೇ ವೇಳೆ ಘೋಷಿಸಬಹುದಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
