ಬೆಂಗಳೂರು:
ಇಲ್ಲಸಲ್ಲದನ್ನೆಲ್ಲ ಪ್ರಚಾರ ಮಾಡುವ ಮೂಲಕ ಮಾಧ್ಯಮ ಮಿತ್ರರು ತಮ್ಮ ವಿಶ್ವಾಸಾರ್ಹತೆ ಕಳೆದುಕೊಳ್ಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮಾದ್ಯಮದವರ ಮೇಲೆ ಕಿಡಿಕಾರಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ನಡೆಯುತ್ತಿರುವ ರಾಜಕೀಯ ಬೆಳವಣಿಗೆಯ ಬಗ್ಗೆ
ಮಾತನಾಡಿ, ಇಲ್ಲಸಲ್ಲದನ್ನೆಲ್ಲ ಪ್ರಚಾರ ಮಾಡುವ ಮೂಲಕ ಮಾಧ್ಯಮ ಮಿತ್ರರು ತಮ್ಮ ವಿಶ್ವಾಸಾರ್ಹತೆ ಕಳೆದುಕೊಳ್ಳುತ್ತಿದ್ದಾರೆ. ಇದರಿಂದ ಸರ್ಕಾರಕ್ಕೆ ಯಾವುದೇ ಅಪಾಯವಿಲ್ಲ. ನಾವೆಲ್ಲರೂ ನಮ್ಮದಿಯಿಂದಲೇ ಇದ್ದೇವೆ. ಬಹುಶಃ ನಿಮಗೆ ನೆಮ್ಮದಿ ಇಲ್ಲದಿರಬಹುದು. ಆದರೆ ನಾವು ಸಾಕಷ್ಟು ನೆಮ್ಮದಿಯಿಂದಿದ್ದೇವೆ ” ಎಂದು ತಿಳಿಸಿದ್ದಾರೆ.
“ಶಾಸಕ ರಮೇಶ್ ಜಾರಕಿಹೊಳಿ ಸೇರಿದಂತೆ ಆರು ಶಾಸಕರು ಕಾಂಗ್ರೆಸ್ ನಿಂದ ಆಚೆ ಹೋಗಲು ಸಿದ್ಧರಿದ್ದಾರೆ ಎಂಬ ವದಂತಿ ಕಳೆದ ಎರಡು ದಿನಗಳಿಂದ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದೆ. ಈ ಆರು ಶಾಸಕರೂ ಮಾಧ್ಯಮಗಳಿಗೆ ನಾಟ್ ರೀಚೇಬಲ್ ಇರಬಹುದು. ಆದರೆ ನಮಗೆ ಅವರು ರೀಚೇಬಲ್. ಅವರೆಲ್ಲರೂ ನಮ್ಮ ಸಂಪರ್ಕದಲ್ಲೇ ಇದ್ದಾರೆ” ಎಂದು ಎಚ್ ಡಿ ಕುಮಾರಸ್ವಾಮಿ ಮಾಧ್ಯಮಗಳಿಗೆ ಹೇಳಿದರು.
ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲ ದಿನಗಳಿಂದ ನಡೆಯುತ್ತಿರುವ ಬೆಳವಣಿಗೆಯ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಈ ಹೇಳಿಕೆ ನೀಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
