ಚಿಕ್ಕಮಗಳೂರು:
ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿರುವ ಬಿಜೆಪಿಯವರು ಲಜ್ಜೆಗೆಟ್ಟವರು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಮನ್ವಯ ಸಮಿತಿಯ ಅಧ್ಯಕ್ಷ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅವರು ಇಂದು ಬೀರೂರಿನಲ್ಲಿ ಮಾತನಾಡಿ, ಯಡಿಯೂರಪ್ಪನವರಿಗೆ 77ವರ್ಷಗಳಾದರೂ ಬುದ್ಧಿ ಬಂದಿಲ್ಲ. ಮುಖ್ಯಮಂತ್ರಿಯಾಗುವ ಆಸೆ ಇನ್ನೂ ಹೋಗಿಲ್ಲ. ಬಿಜೆಪಿಯವರು ಮಾಧ್ಯಮದವರಿಗೆ ಬರೀ ಸುಳ್ಳು ಹೇಳಿಕೊಂಡು, ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿರುವ ಬಿಜೆಪಿಯವರು ಲಜ್ಜೆಗೆಟ್ಟವರು ಎಂದು ವಾಗ್ದಾಳಿ ನಡೆಸಿದರು.
ಶಾಸಕರಿಗೆ ಕೋಟ್ಯಂತರ ರೂಪಾಯಿ ಆಫರ್ ಕೊಡುತ್ತಿರುವ ಬಿಜೆಪಿಯವರಿಗೆ ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ. ಅವರಿಗೆ ಸರ್ಕಾರ ರಚನೆಗೆ ಜನಾದೇಶವಿಲ್ಲದಿದ್ದರೂ ಆರು ತಿಂಗಳಿಂದ ಸಮ್ಮಿಶ್ರ ಸರ್ಕಾರ ಅಸ್ಥಿರಗೊಳಿಸಲು ಪ್ರಯತ್ನಿಸುತ್ತಲೇ ಇದ್ದಾರೆ. ಹರಿಯಾಣದಲ್ಲಿ ಎಲ್ಲರನ್ನೂ ಕೂಡಿಟ್ಟುಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
