ಹರಪನಹಳ್ಳಿ
ಸರ್ಕಾರಿ ಹಾಸ್ಟೆಲ್ಗಳಲ್ಲಿರುವ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ಶುಕ್ರವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.
ಹಾಸ್ಟೆಲ್ಗಳಲ್ಲಿ ಪ್ರತಿ ವಿದ್ಯಾರ್ಥಿಗೂ ತಿಂಗಳಿಗೆ ರೂ.1400 ಕೊಡುತ್ತಿದ್ದು, ಅದನ್ನು ರೂ.2ಸಾವಿರಕ್ಕೆ ಏರಿಕೆ ಮಾಡಬೇಕು. ಪ್ರತಿ ತಾಲೂಕಿನಲ್ಲೂ ನಿಲಯ ಪಾಲಕರ ಕೊರತೆಯಿದ್ದು, ಈಗಿರುವ ವಾರ್ಡನ್ಗಳೂ ಹೆಚ್ಚುವರಿ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ. ಆಗಾಗಿ ಎಲ್ಲ ಹಂತದ ಸಿಬ್ಬಂದಿಗಳನ್ನು ನೇಮಿಸಬೇಕು ಎಂದು ಆಗ್ರಹಿಸಿದರು.
ರಾಜ್ಯದಲ್ಲಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳೂ ಮತ್ತು ಅಲ್ಪಸಂಖ್ಯಾತರ ಹಾಸ್ಟೆಲ್ಗಳೂ ಬಾಡಿಗೆ ಮನೆಗಳಲ್ಲಿ ನಡೆಯುತ್ತಿದ್ದು ಸ್ವಂತ ಕಟ್ಟಡ ನಿರ್ಮಿಸಿಕೊಡಬೇಕು ಎಂದು ಒತ್ತಾಯಿಸಿದರು. ಪ್ರತಿ ಹಾಸ್ಟೆಲ್ನಲ್ಲೂ ಗ್ರಂಥಾಲಯ ಸ್ಥಾಪಿಸಬೇಕು. ಸಿಸಿ ಕ್ಯಾಮೆರಾ ಅಳವಡಿಸಬೇಕು. ವಿದ್ಯಾರ್ಥಿಗಳ ಆಯ್ಕೆ ವಿಚಾರದಲ್ಲಿ ಪಾರದರ್ಶಕ ಕಾಪಾಡಬೇಕು ಎಂದು ಒತ್ತಾಯಿಸಿ ತಹಸೀಲ್ದಾರ ಡಾ.ನಾಗವೇಣಿ ಅವರಿಗೆ ಮನವಿ ಸಲ್ಲಿಸಿದರು. ಎಬಿವಿಪಿ ಮುಖಂಡ ಯೋಗಾನಂದ ಇತರರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
