ಹಾಸನ:
ಇಂದು ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಗಣರಾಜ್ಯೋತ್ಸದಲ್ಲಿ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಡಿ.ರೇವಣ್ಣ ಮತ್ತು ಹಾಸನ ನಗರದ ಬಿಜೆಪಿ ಶಾಸಕ ಪ್ರೀತಮ್ ಗೌಡ ನಡುವೆ ಮಾತಿನ ಚಕಮಕಿ ನಡೆದಿದೆ.
ಗಣರಾಜ್ಯೋತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯುವ ವೇಳೆ ನಗರದ ರಸ್ತೆ ಅಗಲೀಕರಣ ಸಂಬಂಧ ಸಚಿವ ಎಚ್.ಡಿ.ರೇವಣ್ಣ ಮತ್ತು ಶಾಸಕ ಪ್ರೀತಮ್ ನಡವೆ ಮಾತಿಕ ಜಟಾಪಟಿ ನಡೆದಿದೆ.
ಈ ವಿಚಾರವಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ರೇವಣ್ಣ, ರಸ್ತೆ ಅಗಲೀಕರಣ ಸಂಬಂಧ ನನ್ನ ಹಾಗೂ ಬಿಜೆಪಿ ಶಾಸಕರ ನಡುವೆ ಯಾವುದೇ ವಾಗ್ವಾದ ನಡೆದಿಲ್ಲ. ನನಗೆ ಅಭಿವೃದ್ಧಿ ಅಷ್ಟೇ ಮುಖ್ಯ. ರಸ್ತೆ ಜಾಗ ಒತ್ತುವರಿ ಮಾಡಿ ಕಟ್ಟಡ ನಿರ್ಮಾಣ ಮಾಡುವಂತೆ ನಾನೇನು ಹೇಳಿಲ್ಲ. ಬಿ.ಎಂ. ರಸ್ತೆ ಅಗಲೀಕರಣಕ್ಕೆ ಕಟ್ಟಡ ತೆರವು ಮಾಡಲಾಗಿದೆ. ರಸ್ತೆ ಅಗಲೀಕರಣ ಕುರಿತು ನಗರಸಭೆ ಆಯುಕ್ತರು ನನಗೆ ಮಾಹಿತಿ ನೀಡಿಲ್ಲ. ಅವರ ವಿರುದ್ದ ಹಕ್ಕುಚ್ಯುತಿ ಮಂಡಿಸುತ್ತೇನೆ ಎಂದು ಶಾಸಕರು ಹೇಳಿದರು. ಅದಕ್ಕೆ ನಾನು ಆ ರೀತಿ ಹಕ್ಕುಚ್ಯುತಿ ಮಂಡಿಸಲು ಅಗಲ್ಲ ಎಂದು ಹೇಳಿದೆ ಅಷ್ಟೇ ಎಂದು ಸ್ಪಷ್ಟಪಡಿಸಿದರು.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಅಕ್ರಮ ಕಟ್ಟಡ ತೆರವುಗೊಳಿಸಿದ್ದಾರೆ. ಅವ್ರು ರೇವಣ್ಣನ್ನೂ ಕೇಳಲ್ಲಾ ತಿಮ್ಮಣ್ಣನ್ನೂ ಕೇಳಲ್ಲಾ. ಅಭಿವೃದ್ಧಿಗೆ ಬೆಂಬಲ ವ್ಯಕ್ತಪಡಿಸಬೇಕು. ರಾತ್ರೋರಾತ್ರಿ ಕಟ್ಟಡ ತೆರವುಗೊಳಿಸಿಲ್ಲ. ಕಳೆದ ಹತ್ತು ವರ್ಷಗಳಿಂದ ಹಾಸನದಲ್ಲಿ ಅಭಿವೃದ್ಧಿ ಆಗಿಲ್ಲಾ. ನನಗೆ ತಿ ಕೆರ್ಕೊಳ್ಳೋಕೆ ಪುರ್ಸೊತ್ತಿಲ್ಲಾ. ನಾನ್ಯಾಕ್ರೀ ಕಟ್ಟಡ ಒಡೆಸಲಿ ಎಂದು ರೇವಣ್ಣ ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
