ತುಮಕೂರು:
ತುಮಕೂರು ವಿಶ್ವವಿದ್ಯಾನಿಲಯಕ್ಕೆ ಶ್ರೀ ಶಿವಕುಮಾರ ಸ್ವಾಮೀಜಿ ಹೆಸರನ್ನು ನಾಮಕರಣ ಮಾಡಬೇಕು ಎಂದು ಗುಂಡ್ಲುಪೇಟೆ ಬಿಜೆಪಿ ಶಾಸಕ ನಿರಂಜನ ಕುಮಾರ್ ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಲಕ್ಷಾಂತರ ಜನರಿಗೆ ವಿದ್ಯಾ ದಾಸೋಹ ಮಾಡಿರುವ ಶ್ರೀ ಶಿವಕುಮಾರ ಸ್ವಾಮಿಗಳ ದಶಕಗಳ ಕರ್ಮ ಭೂಮಿಯಾಗಿದ್ದ ಅದೇ ಜಿಲ್ಲೆಯ ವಿಶ್ವವಿದ್ಯಾಲಯಕ್ಕೆ ಅವರ ಹೆಸರನ್ನು ನಾಮಕರಣ ಮಾಡುವುದರಿಂದ ವಿಶ್ವವಿದ್ಯಾಲಯದ ಗೌರವ ಇನ್ನಷ್ಟು ಹೆಚ್ಚಾಗುವುದು ಎಂದು ನಿರಂಜನ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ.