ದೆಹಲಿ:
ಕೇಂದ್ರ ಹಣಕಾಸು ಸಚಿವ ಪಿಯೂಷ್ ಗೋಯಲ್ ಅವರು ಇಂದು 16ನೇ ಲೋಕಸಭೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರದ ಕೊನೆಯ ಮತ್ತು ಮಧ್ಯಂತರ ಬಜೆಟ್ ಅನ್ನು ಮಂಡನೆ ಮಾಡಿದ್ದಾರೆ.
ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಅನಾರೋಗ್ಯದಿಂದ ಬಳಲುತ್ತಿರುವ ಕಾರಣದಿಂದಾಗಿ ಅವರ ಅನುಪಸ್ಥಿತಿಯಲ್ಲಿ ಹಣಕಾಸು ಸಚಿವರಾಗಿ ಅಧಿಕಾರ ಸ್ವೀಕರಿಸಿರುವ ಪಿಯೂಷ್ ಗೋಯಲ್ ಅವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಕೊನೆಯ ಬಜೆಟ್ ಅನ್ನು ಮಂಡಿಸಿದ್ದಾರೆ.
ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು ಈಗಿನ 2.5 ಲಕ್ಷದಿಂದ 5 ಲಕ್ಷಕ್ಕೆ ಏರಿಸಬೇಕು ಎನ್ನುವ ಆಸೆಗೆ ಕೇಂದ್ರ ಸರಕಾರ ಬಜೆಟ್ ನಲ್ಲಿ ಅಸ್ತು ಎಂದಿದೆ. ಕೇಂದ್ರ ಸರಕಾರದ ಈ ಹೊಸ ಘೋಷಣೆಯಿಂದಾಗಿ 3 ಕೋಟಿ ಮಧ್ಯಮ ವರ್ಗದ ಕುಟುಂಬಗಳಿಗೆ ಅನುಕೂಲವಾಗಲಿದೆ.
ಅಷ್ಟೇ ಅಲ್ಲದೆ ಉಳಿತಾಯ ಯೋಜನೆಗಳ ಮೂಲಕ 1.5 ಲಕ್ಷದವರೆಗೆ ಹೂಡಿಕೆಗೆ ಅವಕಾಶ ಇದೆ. ಗೃಹ ಸಾಲ 2 ಲಕ್ಷದವರೆಗೆ ತೆರಿಗೆ ವಿನಾಯಿತಿ ಘೋಷಿಸಿದೆ. ಸ್ಟ್ಯಾಂಡರ್ಡ್ ಡಿಡಕ್ಷನ್ 40 ಸಾವಿರದಿಂದ 50 ಸಾವಿರಕ್ಕೆ ಏರಿಕೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ