ಮೈಸೂರು :
ಬಿಜೆಪಿಯವರ ಜೊತೆಗಿನ ಮೈತ್ರಿ ಚೆನ್ನಾಗಿತ್ತು ಎಂದು ಹೇಳುವ ಮೂಲಕ ಸಿ.ಎಸ್. ಪುಟ್ಟರಾಜು ಹೇಳಿಕೆಯನ್ನು ಸಚಿವ ಜಿ.ಟಿ. ದೇವೇಗೌಡ ಸಮರ್ಥಿಸಿಕೊಂಡಿದ್ದಾರೆ.
ಈ ಕುರಿತು ಮಾತನಾಡಿದ ಜಿ.ಟಿ.ದೇವೇಗೌಡರು, ರಾಜ್ಯದಲ್ಲಿ ಈ ಹಿಂದೆ 2006 ರಲ್ಲಿ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿ ಹೆಚ್.ಡಿ. ಕುಮಾರಸ್ವಾಮಿ ಅವರು ಸಿಎಂ ಆಗಿದ್ದರು. ಯಡಿಯೂರಪ್ಪ ಡಿಸಿಎಂ ಆಗಿದ್ದರು. ಆಗ ಕುಮಾರಸ್ವಾಮಿ ಅವರು ತೆಗೆದುಕೊಂಡ ನಿರ್ಣಯಗಳು ಅಂತಿಮವಾಗಿರುತ್ತಿದ್ದವು ಎಂದರು.
ಸದ್ಯ ಕಾಂಗ್ರೆಸ್ ನಲ್ಲಿ ಹಿರಿಯ ರಾಜಕಾರಣಿಗಳು, ಮುತ್ಸದ್ದಿಗಳು ಇದ್ದಾರೆ. ಅವರು ಹೆಚ್ಚು ಹೆಚ್ಚು ಅನುದಾನಕ್ಕೆ ಬೇಡಿಕೆ ಇಡುತ್ತಿದ್ದಾರೆ. ಅಲ್ಲದೇ ಎಲ್ಲಾ ಕಾರ್ಪೋರೇಷನ್ ಮಂಡಳಿಗಳನ್ನು ಅವರ ಹತೋಟಿಗೆ ತೆಗೆದುಕೊಂಡಿದ್ದಾರೆ. ನಾವು ಜೆಡಿಎಸ್ ನವರು ಯಾವುದೇ ಮಂಡಳಿಗಳನ್ನು ತೆಗೆದುಕೊಂಡಿಲ್ಲ. ಹಾಗಾಗಿ ನಮಗೆ ಹೆಚ್ಚು ಅವಕಾಶಗಳು ಸಿಗುತ್ತಿಲ್ಲ ಎನ್ನುವ ಅರ್ಥದಲ್ಲಿ ಹೇಳಿದ್ದಾರೆ ಅಷ್ಟೇ ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ