ಶಿರಾ:
ಪಾಳು ಬಾವಿಗೆ ಬಿದ್ದು ಮೇಲಕ್ಕೆ ಬಾರದೇ ಪರದಾಡುತ್ತಿದ್ದ ಅಪರೂಪದ ಪುನುಗು ಬೆಕ್ಕನ್ನು ವನ್ಯಜೀವಿ ಜಾಗೃತಿ ಹಾಗೂ ಉರಗ ಸಂರಕ್ಷಣಾ ಸಂಸ್ಥೆಯ ಸಿಬ್ಬಂದಿ ರಕ್ಷಿಸಿರುವ ಘಟನೆ ತಾಲೂಕಿನ ಅಮಲಗೊಂದಿ ಗ್ರಾಮದಲ್ಲಿ ನಡೆದಿದೆ.
ಅಮಲಗೊಂದಿ ಗ್ರಾಮದ ತೋಟದವೊಂದರ ಪಾಳು ಬಾವಿಯಲ್ಲಿ ಪುನುಗು ಬೆಕ್ಕು ಪತ್ತೆಯಾಗಿತ್ತು. ಕಾಡಂಚಿನ ಗ್ರಾಮವಾಗಿರುವುದರಿಂದ ಈ ಅಪರೂಪದ ಬೆಕ್ಕು ಕಾಣಿಸಿಕೊಂಡಿದೆ.
ಅಮಲಗೊಂದಿ ನಿವಾಸಿ ಮಂಜುನಾಥ್ ಪ್ರಸಾದ್ ಎಂಬುವರಿಗೆ ಸೇರಿದ ತೋಟದಲ್ಲಿದ್ದ ಪಾಳು ಬಾವಿಯಲ್ಲಿ ಈ ಪುನುಗು ಬೆಕ್ಕು ಬಿದ್ದಿತ್ತು. ಅಲ್ಲದೆ ಭಯಗೊಂಡು ಬಾವಿಯಿಂದ ಮೇಲಕ್ಕೆ ಬಾರದೇ ಪರದಾಡುತಿತ್ತು. ಇದನ್ನು ನೋಡಿದ ಮಂಜುನಾಥ್ ಬಾವಿಯೊಳಗೆ ಏಣಿ ಇಟ್ಟು ಬೆಕ್ಕು ರಕ್ಷಣೆಗೆ ಮುಂಜುನಾಥ್ ಮುಂದಾಗಿದ್ದಾರೆ.
ಅದು ಸಾಧ್ಯವಾಗದೇ ಇದ್ದಾಗ ವನ್ಯಜೀವಿ ಜಾಗೃತಿ ಹಾಗೂ ಉರಗ ಸಂರಕ್ಷಣಾ ಸಂಸ್ಥೆಗೆ ಮಾಹಿತಿ ತಿಳಿಸಿದ್ದಾರೆ. ಕೊನೆಗೆ ಸ್ಥಳಕ್ಕೆ ಬಂದ ವನ್ಯಜೀವಿ ಜಾಗೃತಿ ಹಾಗೂ ಉರಗ ಸಂರಕ್ಷಣಾ ಸಂಸ್ಥೆಯ ಸಿಬ್ಬಂದಿ ಪುನುಗು ಬೆಕ್ಕನ್ನು ಬಾವಿಯಿಂದ ರಕ್ಷಿಸಿ ಮೇಲಕ್ಕೆ ಎತ್ತಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
