ಬೆಂಗಳೂರು:
ಜೆಡಿಎಸ್-ಕಾಂಗ್ರೆಸ್ ದೋಸ್ತಿ ಸರ್ಕಾರದ 2019-20ನೇ ಸಾಲಿನ 2 ನೇ ಬಜೆಟ್ ಅನ್ನು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಇಂದು ಮಂಡಿಸಿದ್ದು, ಕೃಷಿ ಕ್ಷೇತ್ರ ಮತ್ತು ರೈತರಿಗೆ ಭರ್ಜರಿ ಕೊಡುಗೆಗಳನ್ನು ನೀಡಲಾಗಿದೆ ಎನ್ನಲಾಗುತ್ತಿದೆ.
ಕೃಷಿ ಕ್ಷೇತ್ರಕ್ಕೆ ಬಜೆಟ್ ನಲ್ಲಿ ಘೋಷಣೆ ಮಾಡಿರುವ ಮಾಹಿತಿ ಕೆಳಗಿನಂತಿದೆ.
ಕೃಷಿ :
- ಕೃಷಿ ಭಾಗ್ಯ ಯೋಜನೆಗೆ 250 ಕೋಟಿ ರೂ. ಅನುದಾನ.
- ಇಸ್ರೇಲ್ ಮಾದರಿ ಕೃಷಿ ಯೋಜನೆಗೆ 145 ಕೋಟಿ ರೂ.
- ಶೂನ್ಯ ಬಂಡವಾಳ ಕೃಷಿ ಯೋಜನೆಗೆ 40 ಕೋಟಿ ರೂ. ಅನುದಾನ.
- ಸಾವಯವ ಕೃಷಿ ಯೋಜನೆಗೆ 35 ಕೋಟಿ ರೂ.
- ಸಾವಯವ ಮತ್ತು ಶೂನ್ಯ ಬಂಡವಾಳ ಕೃಷಿ ಉತ್ಪನ್ನಗಳ ವರ್ಗೀಕರಣ, ಪ್ಯಾಕಿಂಗ್ ಮತ್ತು ಬ್ರಾಂಡಿಂಗ್ ಘಟಕಗಳಿಗೆ ಪ್ರೋತ್ಸಾಹ; ಅರ್ಹ ಉದ್ದಿಮೆದಾರು, ನವೋದ್ಯಮಿಗಳಿಗೆ ಶೇ. 50 ಪ್ರೋತ್ಸಾಹಧನ; 2 ಕೋಟಿ ರೂ. ಅನುದಾನ.
- ನಾಟಿ ಕೋಳಿ ಸಾಕಾಣೆಗೆ 2 ಕೋಟಿ ರೂಪಾಯಿ
- ಸಿರಿ ಧಾನ್ಯ ಬೆಳೆಗಾರರಿಗೆ ಪ್ರತಿ ಹೆಕ್ಟೇರ್ ಗೆ 10 ಸಾವಿರ ರೂ. ನಗದು
- ಈರುಳ್ಳಿ, ಆಲೂಗಡ್ಡೆ, ಟೊಮ್ಯಾಟೋಗೆ ಬೆಂಬಲ ಬೆಲೆ 50 ಕೋಟಿ, ಪ್ರಮುಖ 6 ಸಿರಿಧಾನ್ಯಗಳಿಗೆ ಬೆಂಬಲ ಬೆಲೆ 10 ಕೋಟಿ ರೂಪಾಯಿ ಅನುದಾನ.
- ಸಿರಿಧಾನ್ಯ ಬೆಳೆಗಾರರಿಗೆ ಉತ್ತೇಜನ ನೀಡಲು “ರೈತಸಿರಿ” ಯೋಜನೆಯಡಿ ಪ್ರತಿ ಹೆಕ್ಟೇರ್ಗೆ 10 ಸಾವಿರ ರೂ. ನಗದು ಪ್ರೋತ್ಸಾಹ; 10 ಕೋಟಿ ರೂ. ಅನುದಾನ.
- ಕರಾವಳಿ ಮತ್ತು ಮಲೆನಾಡು ಭಾಗದ ರೈತರಿಗೆ ಭತ್ತ ಬೆಳೆಯಲು ಪ್ರೇರಣೆ-ಹೆಕ್ಟೇರ್ಗೆ 7500 ರೂ. ಪ್ರೋತ್ಸಾಹಧನ ನೀಡುವ “ಕರಾವಳಿ ಪ್ಯಾಕೇಜ್”ಗೆ 5 ಕೋಟಿ ರೂ. ಅನುದಾನ.
- “ಮುಖ್ಯಮಂತ್ರಿಗಳ ಸೂಕ್ಷ್ಮ ನೀರಾವರಿ ಯೋಜನೆಗೆ 2019-20 ನೇ ಸಾಲನಲ್ಲಿ 368 ಕೋಟಿ ರೂ. ಅನುದಾನ.
- ರಾಜ್ಯದ ಅತಿ ಹೆಚ್ಚು ಬರಪೀಡಿತ ಹಾಗೂ ಅಂತರ್ಜಲ ಮಟ್ಟ ಕುಸಿದಿರುವ 100 ತಾಲ್ಲೂಕುಗಳಲ್ಲಿ 2024ರವರೆಗೆ ಬರ ನಿರೋಧಕ ಜಲಾನಯನ ಚಟುವಟಿಕೆ ಕೈಗೊಳ್ಳಲು 100 ಕೋಟಿ ರೂ ಅನುದಾನ.
- ಕರ್ನಾಟಕ ರಾಜ್ಯ ಬೀಜ ಪ್ರಮಾಣೀಕರಣ ಸಂಸ್ಥೆಯ ಉನ್ನತೀಕರಣ ಹಾಗೂ ಕರ್ನಾಟಕ ರಾಜ್ಯ ಬೀಜ ನಿಗಮದ ಅಭಿವೃದ್ಧಿ ಕಾರ್ಯಗಳಿಗೆ ತಲಾ 5 ಕೋಟಿ ರೂ. ನಿಗದಿ.
- ರಾಜ್ಯದಲ್ಲಿ ಪ್ರತ್ಯೇಕ ಬೆಳೆ ವಿಮಾ ಯೋಜನೆ ಜಾರಿಗೆ ತರುವ ಬಗ್ಗೆ ಪರಿಶೀಲನೆ.
- ಮಂಡ್ಯ ಜಿಲ್ಲೆಯ ವಿ.ಸಿ. ಫಾರಂ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನಲ್ಲಿ ಕೃಷಿ ಪ್ರಾತ್ಯಕ್ಷಿಕೆ ಸಂಸ್ಥೆ ಸ್ಥಾಪನೆಗೆ ಕ್ರಮ. 2019-20 ರಲ್ಲಿ 10 ಕೋಟಿ ರೂ. ಅನುದಾನ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ