ದಾವಣಗೆರೆ


ಬೆಳ್ಳೂಡಿ ಗ್ರಾಮದ ಮೃತ ರೈತ ಪ್ರಕಾಶ್ ಅವರು ಸಾಲಬಾದೆ ತಾಳಲಾರದೆ ಆತ್ಮಹತ್ಯೆಗೆ ಶರಣಾಗಿದ್ದಾರೆ . ಪ್ರಕಾಶ್ ಬೆಳ್ಳೂಡಿ ಗ್ರಾಮ ಪಂಚಾಯತಿ ಸದಸ್ಯರು ಕೂಡ ಆಗಿದ್ದರು. ಇವರು ಅದೇ ಗ್ರಾಮದಲ್ಲಿ ಜಮೀನನ್ನು ಕೂಡ ಹೊಂದಿದ್ದರು. ಸಹಕಾರಿ ಬ್ಯಾಂಕ್ ಮತ್ತು ರಾಷ್ಟ್ರೀಯ ಬ್ಯಾಂಕ್ ಗಳು ಸೇರಿದಂತೆ ಕೈ ಸಾಲ ತೆಗೆದುಕೊಂಡಿದ್ದರು ಎಂದು ತಿಳಿದು ಬಂದಿದೆ.
ಲಕ್ಷಾಂತರ ರೂಪಾಯಿ ಸಾಲ ಹೊಂದಿದ್ದ ರೈತ ಪ್ರಕಾಶ್ ಸಾಲದ ಬಾದೆ ತಾಳಲಾರದೆ ಇದೇ ಫೆಬ್ರವರಿ 13 ರಂದು ವಿಷ ಕುಡಿದು ಆತ್ಮಹತ್ಯೆ ಯತ್ನಿಸಿದ್ದರು ಅವರನ್ನು ಆಸ್ಪತ್ರೆಗೆ ಸೇರಿಸಲಾಯಿತಾದರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಈ ಕುರಿತಾಗಿ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
