ವಿವಿಧಡೆ ರಸ್ತೆ ಕಾಮಗಾರಿಗೆ ತಿಪ್ಪಾರೆಡ್ಡಿ ಚಾಲನೆ

ಚಿತ್ರದುರ್ಗ:

    ನಗರದ ಚೋಳಗುಡ್ಡದ 11 ಮತ್ತು 12 ನೇ ವಾರ್ಡ್‍ನಲ್ಲಿ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಸೋಮವಾರ ರಸ್ತೆ ಕಾಮಗಾರಿಗೆ ಭೂಮಿಪೂಜೆ ಸಲ್ಲಿಸಿದರು.ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಶಾಸಕರು ಚೋಳಗುಡ್ಡದಲ್ಲಿ ಇನ್ನು ಅನೇಕ ಮೂಲಭೂತ ಸೌಲಭ್ಯಗಳು ಬೇಕಾಗಿದೆ. ಕೇಂದ್ರ ಸರ್ಕಾರ ನಗರೋತ್ಥಾನ ಯೋಜನೆಯಡಿ ಸಾಕಷ್ಟು ಅನುದಾನ ಬಿಡುಗಡೆಗೊಳಿಸಿರುವುದರಿಂದ ಹಂತ ಹಂತವಾಗಿ ನಗರದ ಎಲ್ಲಾ ವಾರ್ಡ್‍ಗಳಲ್ಲಿಯೂ ರಸ್ತೆಗಳನ್ನು ನಿರ್ಮಿಸಲಾಗುವುದು.

       ಇನ್ನು ಹೆಚ್ಚಿನ ಅನುದಾನವನ್ನು ನೀಡುತ್ತೇನೆ. ಸಣ್ಣಪುಟ್ಟ ಭಿನ್ನಾಭಿಪ್ರಾಯ ಬಿಟ್ಟು ಎಲ್ಲರೂ ಒಗ್ಗಟ್ಟಾಗಿ ಸರ್ಕಾರದ ಸೌಲಭ್ಯಗಳನ್ನು ಬಳಸಿಕೊಳ್ಳಿ ಎಂದು ಅಲ್ಲಿನ ನಿವಾಸಿಗಳಿಗೆ ಹೇಳಿದರು.ನಗರಸಭೆ ಮಾಜಿ ಉಪಾಧ್ಯಕ್ಷ ಎಂ.ಹನೀಫ್, ನಗರಸಭೆ ಸದಸ್ಯರುಗಳಾದ ಜಯಂತಿ ಗೊಪ್ಪೆ ಮಂಜುನಾಥ್, ಶಕೀಲಾಭಾನು, ಕಾಂಗ್ರೆಸ್ ಮುಖಂಡರುಗಳಾದ ಸಯೀದು, ಹೆಚ್.ಶಬ್ಬೀರ್‍ಭಾಷ, ಪಟೇಲ್ ನೂರುಲ್ಲಾ ಇನ್ನು ಮೊದಲಾದವರು ಈ ಸಂದರ್ಭದಲ್ಲಿ ಹಾಜರಿದ್ದರು.

       ಸಂತೆಹೊಂಡದ ರಸ್ತೆ ನಗರದ ಸಂತೆಹೊಂಡದ ರಸ್ತೆ ಕಾಮಗಾರಿಗೆ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಸೋಮವಾರ ಚಾಲನೆ ನೀಡಿದರು.
ರಸ್ತೆ ಕಾಮಗಾರಿಗೆ ಪೂಜೆ ಸಲ್ಲಿಸಿ ಮಾತನಾಡಿದ ಶಾಸಕರು ಹಂತ ಹಂತವಾಗಿ ನಗರದ ಎಲ್ಲಾ ಬೀದಿಗಳಲ್ಲಿಯೂ ಸಿಮೆಂಟ್ ರಸ್ತೆ ನಿರ್ಮಿಸಲಾಗುವುದು. ನಗರೋತ್ಥಾನ ಹಾಗೂ ಅಮೃತ್‍ಸಿಟಿ ಯೋಜನೆಯಡಿ ದೇಶದ ಪ್ರಧಾನಿ ನರೇಂದ್ರಮೋದಿರವರು ಕೋಟ್ಯಾಂತರ ರೂ.ಗಳ ಅನುದಾನ ನೀಡಿದ್ದಾರೆ ಎಂದು ಹೇಳಿದರು.

       ನಗರಸಭೆ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಮಹಮದ್ ಅಹಮದ್ ಪಾಷ, ನಗರಸಭೆ ಸದಸ್ಯರುಗಳಾದ ಸುರೇಶ್, ಟಿ.ರಮೇಶ್, ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಎಂ.ಎ.ಸೇತೂರಾಂ, ಆರ್ಯವೈಶ್ಯ ಸಂಘದ ಅಧ್ಯಕ್ಷ ಕಾಶಿವಿಶ್ವನಾಥಶೆಟ್ಟಿ, ಹಣ್ಣಿನ ವ್ಯಾಪಾರಿಗಳ ಸಂಘದ ಜಿಲ್ಲಾಧ್ಯಕ್ಷ ಸಮೀವುಲ್ಲಾಷರೀಪ್, ರೇಖ, ಹೆಚ್.ಶಬ್ಬೀರ್‍ಭಾಷ ಇನ್ನು ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

       ಖಬರಸ್ಥಾನದಲ್ಲಿ ಮೆದೆಹಳ್ಳಿ ರಸ್ತೆಯಲ್ಲಿರುವ ಖಬರಸ್ಥಾನದಲ್ಲಿ ಸಿಮೆಂಟ್ ರಸ್ತೆಗೆ ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ಸೋಮವಾರ ಚಾಲನೆ ನೀಡಿದರು. ಸರ್ ಖಾಜಿ ಸೈಯದ್ ಶಂಷುದ್ದಿನ್ ಓದಿಕೆ ಮಾಡಿದರು.ನಗರಸಭೆ ಮಾಜಿ ಅಧ್ಯಕ್ಷ ಮಹಮದ್ ಅಹಮದ್ ಪಾಷ, ಸದಸ್ಯರುಗಳಾದ ಟಿ.ರಮೇಶ್, ಸುರೇಶ್, ಹೆಚ್.ಶಬ್ಬೀರ್‍ಭಾಷ ಸೇರಿದಂತೆ ಅನೇಕ ಅಲ್ಪಸಂಖ್ಯಾತ ಮುಖಂಡರುಗಳು ಈ ಸಂದರ್ಭದಲ್ಲಿ ಹಾಜರಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap