ರಸ್ತೆ ಅಪಘಾತ : ಒಂದೇ ಕುಟುಂಬದ ಮೂವರ ಸಾವು

ಚಿತ್ರದುರ್ಗ

         ಲಾರಿ ಮತ್ತು ಕಾರಿನ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯ ಪರಿಣಾಮವಾರಿ ಸ್ಥಳದಲ್ಲೇ ಮೂವರು ಮೃತಪಟ್ಟಿರುವ ಘಟನೆ ಸಮೀಪದ ಬೊಗಳೇರಹಟ್ಟಿ ಬಳಿ ರಾಷ್ಟ್ರೀಯ ಹೆದ್ದಾರಿನಲ್ಲಿ ಬುಧವಾರ ಮದ್ಯಾಹ್ನ ನಡೆದಿದೆ.ಮೃತಪಟ್ಟವರನ್ನು ಜಗಳೂರು ತಾಲೂಕು ಬಂಗಾರಕ್ಕನಗುಡ್ಡ ಗ್ರಾಮದ ಕೇಶವಮೂರ್ತಿ(40) ನಾಗಮ್ಮ(30) ಮತ್ತು ರಾಧಿಕಾ(22) ಎಂದು ಗುರುತಿಸಲಾಗಿದ್ದು ಇವರೆಲ್ಲಾ ಒಂದೇ ಕುಟುಂಬದವರೆನ್ನಲಾಗಿದೆ.

         ಚಿತ್ರದುರ್ಗ ತಾಲೂಕಿನ ಬೊಗಳೇರಹಟ್ಟಿ ಬಳಿ ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಈ ದುರ್ಘಟನೆ ನಡೆದಿದೆ. ಜಗಳೂರಿನಿಂದ ಚಿತ್ರದುರ್ಗಕ್ಕೆ ಬರುತ್ತಿದ್ದ ಕಾರಿಗೆ ಹೊಸಪೇಟೆ ಕಡೆ ತೆರಳುತ್ತಿದ್ದ ಲಾರಿ ಡಿಕ್ಕಿ ಹೊಡೆದ ಪರಿಣಾಮವಾಗಿ ಅಪಘಾತವಾಗಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ

         ಅಪಘಾತ ನಡೆದ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿ ಪೊಲೀಸರು ವಾಹನಗಳ ಅವಶೇಷಗಳಡಿಯಲ್ಲಿ ಸಿಕ್ಕಿಹಾಕಿಕೊಂಡಿದ್ದ ಮೃತದೇಹಗಳನ್ನು ಹೊರ ತೆಗೆದಿದ್ದಾರೆ. ಕಾರಿನಲ್ಲಿದ್ದ ಕಾವ್ಯ ಎಂಬಾಕೆಗೆ ಗಂಭೀರ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ದಾವಣಗೆರೆಯ ಆಸ್ಪತ್ರೆಗೆ ದಾಖಲಿಸಲಾಗಿದೆ.

         ಈ ಸಂಬಂಧ ತುರುವನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ. ಘಟನೆ ನಡೆದ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ರಾಷ್ತ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದರಿಂದ ಕೆಲ ಕಾಲ ವಾಹನಗಳ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಅಕ್ಕಪಕ್ಕದ ಗ್ರಾಮಸ್ಥರೂ ಜಮಾಯಿಸಿದ್ದರು. ಪೊಲೀಸರು ವಾಹನಗಳನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

 

Recent Articles

spot_img

Related Stories

Share via
Copy link