ಕರಡಿ ದಾಳಿ: ಓರ್ವನಿಗೆ ಗಂಭೀರ ಗಾಯ…!!

ಮಧುಗಿರಿ:

       ರಾತ್ರಿ ವೇಳೆಯಲ್ಲಿ ಜಮೀನಿಗೆ ನೀರು ಕಟ್ಟಲು ತೆರಳಿದ್ದವರ ಮೇಲೆ ಎರಡು ಕರಡಿಗಳು ದಾಳಿ ನಡೆಸಿ, ಮೂವರನ್ನು ಗಾಯಗೊಳಿಸಿರುವ ಘಟನೆ ಮಂಗಳವಾರ ಬೆಳಗಿನ ಜಾವ ಜರುಗಿದೆ.

       ತಾಲೂಕಿನ ಮಿಡಿಗೇಶಿ ಹೋಬಳಿಯ ಪಡಸಾಲಹಟ್ಟಿ ಗ್ರಾಮದ ಮೈಲಾರಪ್ಪ (52), ಶಿವರಾಜು (27) ಸುರೇಶ್ (22) ಗಾಯ ಗೊಂಡಿದ್ದಾರೆ. ಗಾಯಾಳುಗಳನ್ನು ಮಧುಗಿರಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು. ಸುರೇಶ್ ಪರಿಸ್ಥಿತಿ ಬಹಳ ಗಂಭೀರವಾಗಿದ್ದು, ಇತನನ್ನು ತುಮಕೂರು ಜಿಲ್ಲಾಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿದೆ. ಆಗಾಗ ಪಡಸಾಲಹಟ್ಟಿ ಗ್ರಾಮದ ಆಸುಪಾಸಿನಲ್ಲಿ ಕರಡಿಗಳು ಕಾಣಿಸಿಸಿಕೊಳ್ಳುತ್ತಿದ್ದು ಜನರು ಭಯದ ವಾತವಾರಣದಲ್ಲಿದ್ದಾರೆ ಇಂತಹ ಕರಡಿಗಳನ್ನು ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಯ ಸಿಬ್ಬಂದಿಗಳಿಗೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link