ತುಮಕೂರು
ತುಮಕೂರು ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಎರಡನೇ ದಿನವಾದ ಮಾರ್ಚ್ 20 ರಂದು ಇಬ್ಬರು ಪಕ್ಷೇತರ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಮಧುಗಿರಿ ತಾಲ್ಲೂಕು ಕರಡಿಪುರ(23ನೇ ವಾರ್ಡ್) ಎಸ್.ಎಂ.ಕೃಷ್ಣ ಬಡಾವಣೆಯ ಜಿ.ನಾಗೇಂದ್ರ S/o ಗಂಗನಭೋವಿ, ತುಮಕೂರು ತಾಲ್ಲೂಕು ಕೋರಾ ಹೋಬಳಿಯ ಗೌರಗಾನಹಳ್ಳಿ ಕೆಸ್ತೂರಿನ ಹನುಮಂತರಾಯಪ್ಪ ಬಿನ್ ಪುಟ್ಟಯ್ಯ ಅವರು ಪಕ್ಷೇತರ ಅಭ್ಯರ್ಥಿಗಳಾಗಿ ನಾಮಪತ್ರ ಸಲ್ಲಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ: ಕೆ.ರಾಕೇಶ್ ಕುಮಾರ್ ತಿಳಿಸಿದ್ದಾರೆ
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
