ಧಾರವಾಡ ಕಟ್ಟಡ ಕುಸಿತ : ಸಾವಿನ ಸಂಖ್ಯೆ 9ಕ್ಕೆ ಏರಿಕೆ!

ಧಾರವಾಡ:

      ಧಾರವಾಡದಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಕುಸಿದ ಪರಿಣಾಮವಾಗಿ ಕಟ್ಟಡದ ಅವಶೇಷಗಳಡಿ ಸಿಲುಕಿಕೊಂಡು ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.

      ಭೀಕರ ದುರಂತದಲ್ಲಿ ಮೃತಪಟ್ಟಿರುವ ಓರ್ವ ವೃದ್ಧೆ ಹಾಗೂ ಮಗುವಿನ ಮೃತದೇಹವನ್ನು ಗುರುವಾರ ಹೊರಕ್ಕೆ ತೆಗೆಯಲಾಗಿದೆ.

      ಇದೇ ವೇಳೆ ಕಾರ್ಯಾಚರಣೆ ನಡೆಸಿ ಇಬ್ಬರ ರಕ್ಷಣೆ ಮಾಡಲಾಗಿದೆ. ಧಾರವಾಡ ನಿವಾಸಿ ಪ್ರೇಮಾ ಉಣಕಲ್ (38) ಮತ್ತು ಕಲಘಟಗಿಯ ವಿದ್ಯಾರ್ಥಿ ನಬೀಸಾಬ್ ನದಾಪ್ ಅವರನ್ನು NDRF ಸಿಬ್ಬಂದಿಗಳು ಒಂದೂವರೆ ಘಂಟೆ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಲಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

     ಅದರಲ್ಲಿ ಉತ್ತರ ಕರ್ನಾಟಕ ಭಾಗದ 12ಕ್ಕೂ ಹೆಚ್ಚು ಮಂದಿ ವಿದ್ಯಾರ್ಥಿನಿಯರು ಕೂಡ ಇದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಸತತ ಕಾರ್ಯಾಚರಣೆ ನಾಳೆಯೂ ಮುಂದುವರಿಯಲಿದೆ ಎಂದು ಮೂಲಗಳು ತಿಳಿಸಿವೆ. ಈ ವರೆಗೆ 60ಕ್ಕೆ ಅಧಿಕ ಮಂದಿಯನ್ನು ರಕ್ಷಿಸಲಾಗಿದೆ ಎಂದು ತಿಳಿದು ಬಂದಿದೆ.

     ಹೀಗಾಗಿ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಭೀತಿ ಎದುರಾಗಿದೆ. ಅವಷೇಶದಡಿ ಸಿಲುಕಿದವರಿಗೆ ನಿರಂತರವಾಗಿ ಪೈಪ್ ಮುಖಾಂತರ ನೀರು ಮತ್ತು ಆಮ್ಲಜನಕ ಪೂರೈಕೆ ಮಾಡಲಾಗುತ್ತಿದೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

Recent Articles

spot_img

Related Stories

Share via
Copy link