ಯಡಿಯೂರಪ್ಪನವರ ಪ್ರಕರಣವನ್ನು ಲೋಕಪಾಲ್ ತನಿಖೆಗೆ ಒಪ್ಪಿಸಿ : ಸಿದ್ದರಾಮಯ್ಯ

ಬೆಂಗಳೂರು

      ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ಪಕ್ಷದ ರಾಷ್ಟ್ರೀಯ ಮುಖಂಡರಿಗೆ 1800 ಕೋಟಿ ಕಪ್ಪ ನೀಡಿರುವ ಸತ್ಯಾಸತ್ಯತೆ ತಿಳಿಯಲು ಪ್ರಕರಣವನ್ನು ಲೋಕಪಾಲ್ ತನಿಖೆಗೆ ಒಪ್ಪಿಸಬೇಕೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗ್ರಹಪಡಿಸಿದ್ದಾರೆ.

       ನಗರದ ಗಾಂಧಿಭವನದಲ್ಲಿ ಇಂದಿಗೂ ಬೇಕಾದ ಲೋಹಿಯಾ ಕೃತಿ ಬಿಡುಗಡೆ ಸಮಾರಂಭದ ಬಳಿಕ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು ಲೋಕಪಾಲ್ ತನಿಖೆ ನಂತರ ಯಾವುದು ಅಸಲಿ, ಯಾವುದು ನಕಲಿ ಎಂಬುದು ಗೊತ್ತಾಗುತ್ತದೆ ಎಂದು ತಿಳಿಸಿದರು.

       ಡೈರಿ ಪ್ರಕರಣವನ್ನು ಯಡಿಯೂರಪ್ಪ ಅವರು ಅಲ್ಲಗೆಳೆದಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ ಅವರು ಯಡಿಯೂರಪ್ಪ ಅವರು ಒಂದೇ ಕಡೆ ಸತ್ಯ ಹೇಳಿದ್ದಾರೆ. ಉಳಿದೆಲ್ಲ ಕಡೆ ಸುಳ್ಳು ಹೇಳಿಕೊಂಡೇ ಬಂದಿದ್ದಾರೆ ಎಂದರು.
ಯಡಿಯೂರಪ್ಪರವರ ಡೈರಿ ಪ್ರಕರಣದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಏಕೆ ಮಾತನಾಡುತ್ತಿಲ್ಲ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link