ತುರುವೇಕೆರೆ:
ಇಂದಿನ ಯವ ಜನತೆ ಕೆಲವು ದುಶ್ಚಟಗಳಿಗೆ ಬಲಿಯಾಗಿ ವಿದ್ಯಾರ್ಥಿ ಜೀವನ ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಮನಶಾಸ್ತ್ರಜ್ಞಾರಾದ ಸುರೇಶ್ ತಿಳಿಸಿದರು.ಪಟ್ಟಣದ ಮಾರುತಿ ಕೈಗಾರಿಕ ತರಬೇತಿ ಸಂಸ್ಥೆ ಕಾಲೇಜಿನಲ್ಲಿ ಶುಕ್ರವಾರ ಸಾರ್ವಜನಿಕ ಆಸ್ಪತ್ರೆ, ಸಾಮಾಜಿಕ ರಕ್ಷಣಾ ಸಂಸ್ಥೆ ಹಾಗೂ ನಿಮಾನ್ಸ್ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಇಂದಿನ ಯುವ ಜನತೆಗೆ ದುಶ್ಚಟಗಳ ಬಗ್ಗೆ ಅರಿವು ಕಾರ್ಯಕ್ರಮವದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಾತನಾಡಿದರು.
ಇಂದಿನ ತಾಂತ್ರಿಕ ಯುಗದಲ್ಲಿ ಕೆಲವು ಯುವಕ, ಯುವತಿಯರು ಮಾದಕ ವ್ಯಸನಿಗಳಿಗೆ ಬಲಿಯಾಗುತ್ತಿದ್ದಾರೆ. ವಿದ್ಯಾರ್ಥಿಗಳು ಸಿಗರೇಟ್, ಗುಟ್ಕ, ಪಾನ್ಪರಾಗ್, ಮದ್ಯಪಾನ, ಮೋಬೈಲ್ ಪಜಿಜ್ ಗೇಮ್ನಲ್ಲಿ ತೊಡಗಿಸಿಕೊಂಡು ತನ್ನ ವಿದ್ಯಾರ್ಥಿ ಜೀವನವನ್ನು ಹಾಳು ಮಾಡಿಕೊಳ್ಳುವುದು ದೇಶಕ್ಕೆ ಅತ್ಯಂತ ಅಪಾಯಕಾರಿಯಾಗಿದೆ. ಯುವ ಶಕ್ತಿ ನಮ್ಮ ದೇಶದ ಶಕ್ತಿ ಅದ್ದರಿಂದ ಇಂದಿನ ವಿದ್ಯಾರ್ಥಿಗಳಿಗೆ ದುಶ್ಚಟಗಳಿಂದ ಹಾಗುವ ತೊಂದರೆಗಳನ್ನು ತಿಳಿಸುವ ದೃಷ್ಟಿಯಿಂದ ಅರಿವು ಮೂಡಿಸುವಚಿತ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದರು.
ಮಾರುತಿ ಕೈಗಾರಿಕ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಗಿರೀಶ್, ತಾಲೂಕು ಕ್ಷೇತ್ರ ಆರೋಗ್ಯಾಧಿಕಾರಿ ಚಂದ್ರಶೇಖರ್, ಸಂಪನ್ಮೂಲ ವ್ಯಕ್ತಿಗಳಾಗಿ ಸುರೇಶ್, ಹರೀಶ್, ತಾಲೂಕು ಆರೋಗ್ಯ ಇಲಾಕೆಯ ಹೊನ್ನಮ್ಮ ಹಾಗೂ ಕಾಲೇಜು ಸಿಬ್ಬಂದಿ, ವಿದ್ಯಾರ್ಥಿಗಳಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
