ಬಳ್ಳಾರಿ:
ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಸೋಷಲಿಸ್ಟ್ ಸೆಂಟರ್ ಆಫ್ ಇಂಡಿಯಾ(ಕಮ್ಯೂನಿಸ್ಟ್) ಪಕ್ಷ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿದೆ ಎಂದು ಪಕ್ಷದ ರಾಜ್ಯ ಸಮಿತಿ ಸದಸ್ಯ ಕೆ.ಸೋಮಶೇಖರ ತಿಳಿಸಿದ್ದಾರೆ.
ಅವರಿಂದು ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ದೇಶದ 20 ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳ 118 ಕ್ಷೇತ್ರಗಳಲ್ಲಿ ನಮ್ಮ ಪಕ್ಷದಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿದೆ.
ರಾಜ್ಯದ ಬಳ್ಳಾರಿ, ಗುಲ್ಬರ್ಗ, ರಾಯಚೂರು, ದಾವಣಗೆರೆ, ಧಾರವಾಡ, ಬೆಂಗಳೂರು ಗ್ರಾಮಾಂತರ ಮತ್ತು ಮೈಸೂರು-ಕೊಡಗು ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲಿದೆ.
ಬಳ್ಳಾರಿ ಕ್ಷೇತ್ರದಿಂದ ಎ.ದೇವದಾಸ್ ಅವರನ್ನು ಕಣಕ್ಕಿಳಿಸುತ್ತಿದೆಂದರು.ಕಳೆದ ಚುನಾವಣೆಯಲ್ಲಿ ನೂರಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ನಮ್ಮ ಪಕ್ಷ ಸ್ಪರ್ಧೆ ಮಾಡಿತ್ತು. ಆದರೆ ಒಂದು ಕ್ಷೇತ್ರದಲ್ಲಿ ಜಯ ಸಾಧಿಸಲಾಗಿಲ್ಲ ಇದಕ್ಕೆ ಕಾರಣ ಬಂಡವಾಳ ಶಾಹಿಗಳ ಹಿತ ಕಾಪಾಡುವ ಪಕ್ಷಗಳ ಹಣದ ಬಲವಾಗಿದೆಂದರು.
ನಾವು ಸಾಕಷ್ಟು ಜ್ವಲಂತ ಹೋರಾಟಗಳನ್ನು ಮಾಡುತ್ತಿದೆ. ಆದರೆ ಅಭಿಪ್ರಾಯ ಮೂಡಿಸಲು ಎಲೆಕ್ಟ್ರಾನಿಕ್ ಮಾಧ್ಯಮಗಳ ಸಹಕಾರ ದೊರೆಯುತ್ತಿಲ್ಲ ಎಂದು ಆರೋಪಿಸಿದರು.
ಕಳೆದ ಐದು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನಿರುದ್ಯೋಗವನ್ನು ಕಡಿಮೆ ಮಾಡಲು ಅವರ ಪ್ರಯತ್ನ ಮಾಡಲಿಲ್ಲ. ನಿರುದ್ಯೋಗ ಇಂದಿಗೂ ತಾಂಡವಾಡುತ್ತಿದೆಂದರು.
ಜನರ ಸಮಸ್ಯೆಗಳನ್ನು ಕೈಗೆತ್ತಿಕೊಂಡು ನಡೆಸಿರುವ ಹೋರಾಟಗಳಿಂದ ಜನ ಈಗ ಬದಲಾವಣೆ ಬಯಸುತ್ತಿದ್ದು.ಬಂಡವಾಳ ಶಾಹಿಗಳ ಕೃಪಾ ಪೋಷಿತ ಪಕ್ಷಗಳಿಗೆ ಪರ್ಯಾಯವಾಗಿ ನಮ್ಮ ಪಕ್ಷವನ್ನು ಬೆಂಬಲಿಸಲಿದ್ದಾರೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.
ಮಾರ್ಚ್ 28 ರಂದು ನಾಮಪತ್ರ ಸಲ್ಲಿಸಲಿದ್ದು ಹೋರಾಟವೇ ನಮ್ಮ ಉಸಿರಾಗಿರುವುದರಿಂದ ಸಂಸತ್ ನಲ್ಲಿ ನಿಮ್ಮ ಸಮಸ್ಯೆಗಳ ಬಗ್ಗೆ ಧ್ವನಿ ಎತ್ತಲು ನಮಗೆ ಮತ ನೀಡಿ ಎಂದು ಕೋರಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
