ನಗರಸಭೆ ಆವರಣದಲ್ಲಿ ಪೌರಕಾರ್ಮಿಕರಿಗೆ ಮತದಾರರ ಜಾಗೃತಿ ಮತ್ತು ವಿವಿಪ್ಯಾಟ್ ಪ್ರಾತ್ಯಕ್ಷತೆ

ಹಾವೇರಿ

       ಜಿಲ್ಲಾ ಪಂಚಾಯತಿ ಹಾಗೂ ತಾಲ್ಲೂಕು ಪಂಚಾಯತ ಹಾವೇರಿ ಇವರ ಸಮಯುಕ್ತ ಆಶ್ರಯದಲ್ಲಿ ಹಾವೆರಿ ನಗರ ಸಭೆ ಆವರಣದಲ್ಲಿ ನಗರ ಸಭೆಯ ಪೌರ ಕಾರ್ಮಿಕರು, ಸಿಬ್ಬಂಂದಿ ವರ್ಗದವರು ಹಾಗೂ ಸಾರ್ವಜನಿಕರಿಗೆ ಮತದಾರರ ಜಾಗೃತಿ ಕಾರ್ಯಕ್ರಮವನ್ನು ಜರುಗಿಸಲಾಯಿತು.

        ಸದರಿ ಕಾರ್ಯಕ್ರಮದಲ್ಲಿ ಮಾನ್ಯ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀಮತಿ ಕೆ ಲೀಲಾವತಿ ಮಾತನಾಡಿ ಪೌರಕಾರ್ಮಿಕರಿಗೆ ಮತ್ತು ನಗರಸಭೆ ಸಿಬ್ಬಂದಿ ವರ್ಗದರಿಗೆ ಹಾಗೂ ಸಾರ್ವಜನಿಕರಿಗೆ ಮತದಾನದ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು ತಾವೇ ಸ್ವತಃ ವಿವಿಪ್ಯಾಟ್ ಮೂಲಕ ಮತದಾನ ಮಾಡಿ ಪ್ರತಿಯೊಬ್ಬ ಪ್ರಜೆಯು ಮತದಾನದ ಹಕ್ಕನ್ನು ಚಲಾಯಿಸಬೇಕೆಂದು ಹೇಳಿದರು.

       ಹಾಗೂ ಸದರಿ ನಗರ ಸಭೆಯ ವಾಹನಗಳ ಮೂಲಕ ಸ್ಟಿಕ್ಕರ್ಸ ಹಾಗೂ ಕರಪತ್ರಗಳನ್ನು ಅಂಟಿಸಿ ಹಾÀಡಿನ ಮೂಲಕ ಜಾಗೃತಿ ಮೂಡಿಸಲು ತಿಳಿಸಿದರು . ಈ ಸಂಧರ್ಭದಲ್ಲಿ ತಾಲೂಕ ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಯಾದ ಶ್ರೀಮತಿ ಅನ್ನಪೂರ್ಣ ಮುದುಕಮ್ಮನವರ ಮಾತನಾಡಿ ಮತದಾನ ಅತ್ಯಂತ ಪವಿತ್ರ ಹಕ್ಕು, ಪ್ರಜಾಪಭುತ್ವದ ಬಲವರ್ದನೆಗಾಗಿ ಎಲ್ಲಾರು ಕಡ್ಡಾಯವಾಗಿ ಮತದಾನವನ್ನು ಮಾಡಬೇಕು ಹಾಗೂ ಮತದಾನದಲ್ಲಿ ಭಾಗವಹಿಸುವದು ಪ್ರಜೆಗಳ ಕರ್ತವ್ಯವಾಗಿದೆ ಎಂದು ತಿಳಿಸಿದರು.

          ಜಿಲ್ಲಾ ವಯಸ್ಕರ ಶಿಕ್ಷಣ ಅಧಿಕಾರಿ ಶ್ರೀ ಎಂ ಹೆಚ್ ಪಾಟೀಲ್ ಕ್ಷೇತ್ರ ಶಿಕ್ಷಣಾಧಿಕಾರಿಯಾದ ಶ್ರೀ ಸಿ ಶಿವಣ್ಣ ಹಾಗೂ ಅಕ್ಷರದಾಸೋಹದ ಸಹಾಯಕ ನಿರ್ದೇಶಕರಾದ ಶ್ರೀಮತಿ ಪುಷ್ಪಾ ಬಿದರಿ ಹಾಗೂ ಸೆಕ್ಟರ್ ಅಧಿಕಾರಿಗಳಾದ ಶ್ರೀ ಐ ಹೆಚ್ ಇಚ್ಚಂಗಿ ಶ್ರೀ ಸಿ ಎಸ್ ಭಗವಂತಗೌಡ್ರ ತಾಲ್ಲೂಕು ಸಾಕ್ಷರ ಸಂಯೋಜಕರಾದ ಶ್ರೀ ಎನ್ ಹೆಚ್ ಕರೇಗೌಡ್ರ ಹಾಗೂ ತಾಲ್ಲೂಕು ಪಂಚಾಯತ ಎನ್ ಆರ್ ಎಲ್ ಎಂ ಡಿ ಇ ಓ ಹಿತೈಸಿ ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link