ಕೊಟ್ಟೂರು
ಲೋಕಸಭಾ ಚುನಾವಣೆಯ ನಂತರ ರಾಜ್ಯದಲ್ಲಿ ಆಡಳಿತವಿರುವ ಜೆಡಿಎಸ್-ಕಾಂಗ್ರೇಸ್ ಸಮ್ಮಿಶ್ರ ಸರ್ಕಾರ ಖಂಡಿತ ಪತನವಾಗುತ್ತದೆ ಎಂದು ಬಿಜೆಪಿ ಮುಖಂಡ-ಶಾಸಕ ಶ್ರೀರಾಮುಲು ಭವಿಷ್ಯ ನುಡಿದರು.ಸೋಮವಾರ ಸಂಜೆ ಕೊಟ್ಟೂರು ತಾಲೂಕು ಉಜ್ಜಿನಿ ಗ್ರಾಮದಲ್ಲಿ ಬಳ್ಳಾರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ದೇವೇಂದ್ರಪ್ಪ ಪರವಾಗಿ ಚುನಾವಣೆ ಪ್ರಚಾರ ಸಭೆಯಲ್ಲಿ ಮಾತನಾಡಿದರು.
ಸಮಿಶ್ರ ಸರ್ಕಾರ ಪತನವಾದ ನಂತರ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತಕ್ಕೆ ಬರುವುದು ಖಚಿತವೆಂದ ಅವರು, ದೇಶದ ಅಭಿವೃದ್ದಿಗಾಗಿ ಮತ್ತು ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ಪತ್ರಿಯೊಬ್ಬರೂ ಬಿಜೆಪಿಗೆ ಹಾಗೂ ಅಭ್ಯರ್ಥಿ ದೇವೇಂದ್ರಪ್ಪ ಅವರಿಗೆ ಮತಹಾಕುವಂತೆ ಕೋರಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕೂಡ್ಲಿಗಿ ಕ್ಷೇತ್ರದ ಶಾಸಕ ಗೋಪಾಲಕೃಷ್ಣ, ಈ ಸಾರಿ ಬಿಜೆಪಿ ಅಭ್ಯರ್ಥಿ ದೇವೇಂದ್ರಪ್ಪ ಗೆಲ್ಲುವುದು ಖಚಿತ. ಕಾಂಗ್ರೇಸ್ ಅಭ್ಯರ್ಥಿಪರವಾಗಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಬಳ್ಳಾರಿ ಬಂದು ಕಾಂಗ್ರೇಸ್ ಅಭ್ಯರ್ಥಿ ಉಗ್ರಪ್ಪರ ಪರವಾಗಿ ಪ್ರಚಾರ ಮಾಡಿದರೂ ಏನೂ ಪ್ರಯೋಜನವಿಲ್ಲ ಎಂದರು.ಜಿಲ್ಲಾ ಬಿಜೆಪಿ ಅಧ್ಯಕ್ಷ ಚನ್ನಬಸವನಗೌಡ, ಕೋಡಿಹಳ್ಳಿ ಭೀಮಣ್ಣ, ಬಂಗಾರು ಹನುಮಂತ, ವೀರನಗೌಡ್ರು, ವಿ.ಲೋಕೇಶ, ಸೋಮಣ್ಣ, ವಕೀಲ ಮರುಳಸಿದ್ದಪ್ಪ, ಅಡ್ಡೆ ವೀರಣ್ಣ, ಬಸವರಾಜ,ನಾಗಪ್ಪ ಮುಂತಾದವರು ಇದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
