ಕಣವಿಹಳ್ಳಿ ಗ್ರಾಮಸ್ಥರ ಮನವೊಲಿಸುವಲ್ಲಿ ಯಶಸ್ವಿಯಾದ ಅಧಿಕಾರಿಗಳು

ಹರಪನಹಳ್ಳಿ:

       ಗ್ರಾಮ ಪಂಚಾಯಿತಿ ಸದಸ್ಯರ ಸಂಖ್ಯೆ ಹೆಚ್ಚಿಸಬೇಕು ಎಂದು ಆಗ್ರಹಿಸಿ ಲೋಕಸಭಾ ಚುನಾವಣೆ ಬಹಿಷ್ಕಾರಕ್ಕೆ ಮುಂದಾಗಿದ್ದ ತಾಲ್ಲೂಕಿನ ಕಣವಿಹಳ್ಳಿ ಗ್ರಾಮಸ್ಥರ ಮನವೊಲಿಸುವಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

        ತಾಲ್ಲೂಕಿನ ನಂದಿಬೇವೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಕಣವಿಹಳ್ಳಿ ಗ್ರಾಮ 500 ಮನೆ, 3000 ಸಾವಿರ ಜನಸಂಖ್ಯೆ ಹೊಂದಿದೆ. ಗ್ರಾಮದಲ್ಲಿ ಒಟ್ಟು 1904 ಮತದಾರರು ಇದ್ದಾರೆ. ಆದರೆ ಮತದಾರರ ಸಂಖ್ಯೆಗೆ ಅನುಗುಣವಾಗಿ ಗ್ರಾಮ ಪಂಚಾಯಿತಿ ಸದಸ್ಯರಿಲ್ಲ ಎಂಬ ನೋವು ಗ್ರಾಮಸ್ಥರನ್ನು ಕಾಡುತ್ತಿದೆ. ಹೀಗಾಗಿ 2015ರ ಚುನಾವಣೆಯಿಂದ ಇಲ್ಲಿಯವರಿಗೆ ಏಳು ಬಾರಿ ಗ್ರಾಮ ಪಂಚಾಯಿತಿ ಚುನಾವಣೆ ಗ್ರಾಮಸ್ಥರು ಬಹಿಷ್ಕರಿಸುತ್ತಾ ಬಂದಿದ್ದರು. ಈಗ ಲೋಕಸಭಾ ಚುನಾವಣೆ ಬಹಿಷ್ಕರಕ್ಕೂ ಮುಂದಾಗಿದ್ದರು.
ಬೇಡಿಕೆ ಈಡೇರಿಕೆಗಾಗಿ ಉಪವಿಭಾಗಾಧಿಕಾರಿ, ತಹಶೀಲ್ದಾರ, ತಾಲೂಕು ಪಂಚಾತಿಯಿ ಕಾರ್ಯನಿರ್ವಾಹಕ ಅಧಿಕಾರಿ, ಪೆÇಲೀಸ್ ವೃತ್ತ ನಿರೀಕ್ಷಕರು ವಿವಿಧ ಹಂತದ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರು.

          ಗುರುವಾರ ಕಣವಿಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ ಉಪವಿಭಾಗಾಧಿಕಾರಿ ಡಾ.ಬಿ.ಎಸ್. ಮಂಜುನಾಥಸ್ವಾಮಿ, ತಹಶೀಲ್ದಾರ ಪ್ರಸಾದ ಹಾಗೂ ಅಧಿಕಾರಿಗಳ ತಂಡ ಗ್ರಾಮದ ಮುಖಂಡ ಸಭೆ ನಡೆಸಿ ಅವರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

        `ಇದು ಗ್ರಾಮಸ್ಥರ ಕಳೆದ ಐದು ವರ್ಷದಿಂದ ಬೇಡಿಕೆ ಆಗಿದೆ. ಗ್ರಾಮ ಪಂಚಾಯಿತಿ ಸದಸ್ಯರ ಸಂಖ್ಯೆ ಸದ್ಯ ನಾಲ್ಕು ಸ್ಥಾನಗಳಿದ್ದು, ಅದನ್ನು ಕನಿಷ್ಠ ಐದಕ್ಕೆ ಏರಿಸಬೇಕು ಎಂಬ ಗ್ರಾಮಸ್ಥರ ಒತ್ತಾಯವಿದೆ. ಸದ್ಯದ ಹಂತದಲ್ಲಿ ಸದಸ್ಯರ ಸಂಖ್ಯೆ ಹೆಚ್ಚಿಸಲು ಬರಲ್ಲ. 2020ರ ಗ್ರಾಮ ಪಂಚಾಯಿತಿ ಚುನಾವಣೆಗೆ ಸದಸ್ಯರ ಸಂಖ್ಯೆ ಹೆಚ್ಚಳ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸುತ್ತಿದ್ದೇವೆ. ಹೀಗಾಗಿ ಚುನಾವಣೆ ಬಹಿಷ್ಕಾರ ನಿರ್ಧಾರ ಕೈ ಬಿಡಿ ಎಂದು ಗ್ರಾಮಸ್ಥರಲ್ಲಿ ಮನವಿ ಮಾಡಿದ್ದೇವು. ಇದಕ್ಕೆ ಗ್ರಾಮಸ್ಥರು ಸಹಮತ ವ್ಯಕ್ತಪಡಿಸಿದ್ದಾರೆ’ ಎಂದು ಉಪವಿಭಾಗಾಧಿಕಾರಿ ಡಾ.ಬಿ.ಎಸ್. ಮಂಜುನಾಥಸ್ವಾಮಿ ತಿಳಿಸಿದ್ದಾರೆ.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link