ಎಂ ಎನ್ ಕೋಟೆ :
ಜಿಲ್ಲೆಯ ಮತದಾರರು ಯಾವುದೇ ಜಾತಿ ಮತ ಭೇದವಿಲ್ಲದೆ ದೇಶದ ಅಭಿವೃದ್ಧಿಗೆ ಹಾಗೂ ಉದ್ಯೋಗ ಸೃಷ್ಟಿಸುವ ನಿಟ್ಟಿನಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌರನ್ನು ಬೆಂಬಲಿಸಬೇಕು ಎಂದು ತಾಲ್ಲೂಕ್ ಪಂಚಾಯಿತಿ.ಸದಸ್ಯೆ ಕರಿಯಮ್ಮ.ರಮೇಶ್ ತಿಳಿಸಿದರು.
ಗುಬ್ಬಿ ತಾಲ್ಲೂಕಿನ ಮಂಚಲದೊರೆ ಗ್ರಾಮದಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಪರ ಮತಯಾಚಿಸಿ ಮಾತನಾಡಿದ ಅವರು ರಾಜ್ಯದಲ್ಲಿ ಜನಪರ ಹಾಗೂ ರೈತಪರ ಆಡಳಿತ ನೀಡುತ್ತಿರುವ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಯವರ ಕೈ ಬಲಪಡಿಸುವ ನಿಟ್ಟಿನಲ್ಲಿ ಜೆಡಿಎಸ್ ಕಾರ್ಯಕರ್ತರು ಯಾವುದೇ ಭಿನ್ನಭಿಪ್ರಾಯವಿಲ್ಲದೆ ಮೈತ್ರಿ ಅಭ್ಯರ್ಥಿ ಪರ ಗೆಲುವಿಗೆ ಶ್ರಮಿಸಬೇಕು.ಎಂದರು.
ಇಡೀ ಜಿಲ್ಲೆಯ ಉಸ್ತುವರಿ ಹೊತ್ತಿರುವ ಸಚಿವ ಎಸ್ ಆರ್ ಶ್ರೀನಿವಾಸ್ ಕ್ಷೇತ್ರದಲ್ಲಿ ಅತ್ಯಧಿಕ ಮತಗಳನ್ನು ಹಾಕಲು ನಾವು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ.ಈ ಭಾಗದ ಮಠ ಗಂಗಯ್ಯನಪಾಳ್ಯ ಕೆರೆಗೆ ಈಗಾಗಲೇ ಸಚಿವರು ಕ್ಯಾಬಿನೆಟ್ ನಲ್ಲಿ ಚರ್ಚಿಸಿ ಈ ಭಾಗದ ಜನರಿಗೆ ನೀರಿನ ಸಮಸ್ಯೆಯನ್ನು ನಿವಾರಿಸಿಲು ಮುಂದಾಗಿದ್ದಾರೆ.ನಮ್ಮ ಕಾರ್ಯಕರ್ತರು ಗುಬ್ಬಿ ತಾಲ್ಲೂಕಿನಲ್ಲಿ ಅತ್ಯಧಿಕ ಮತಗಳನ್ನು ನಾವು ಜೆಡಿಸ್ ಪಕ್ಷಕ್ಕೆ ಕೊಡುತ್ತೇವೆ.ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜೆಡಿಎಸ್ ಮುಖಂಡರಾದ ರಮೇಶ್, ಬಸವರಾಜು,ನರಸಿಂಹಮೂರ್ತಿ,ಮನೋಜ್ ಹಾಗೂ ಕಾರ್ಯಕರ್ತರು ಭಾಗವಹಸಿದ್ದರು.