ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ ಪ್ರಿಯಾಂಕ ಚತುರ್ವೇದಿ

ನವದೆಹಲಿ:
    ಸದ್ಯ ಲೋಕಸಭಾ ಚುನಾವಣೆ ಚಾಲ್ತಿಯಲ್ಲಿದ್ದು ಮೂರನೆ ಹಂತದ ಮತದಾನಕ್ಕೆ ಇನ್ನೂ ಕೇವಲ ಐದು ದಿನ ಬಾಕಿ ಇರುವಾಗ ಕಾಂಗ್ರೆಸ್‌ ಪಕ್ಷಕ್ಕೆ ಮಹಾರಾಷ್ಟ್ರಕ್ಕೆ ದೊಡ್ಡ ಶಾಕ್ ತಗುಲಿದೆ.
      ಕಾಂಗ್ರೆಸ್ ನ ರಾಷ್ಟ್ರೀಯ ವಕ್ತಾರರಾಗಿದ್ದ ಪ್ರಿಯಾಂಕಾ ಚತುರ್ವೇದಿ ಅವರು ಕಾಂಗ್ರೆಸ್ ತೊರೆದು  ಶಿವಸೇನೆಗೆ ಸೇರ್ಪಡೆಯಾಗಿದ್ದಾರೆ . ರಾಜಿನಾಮೆ ಪತ್ರವನ್ನು ಪಕ್ಷದ ಹಿರಿಯ ಮುಖಂಡರಿಗೆ ರವಾನಿಸಿರುವುದಾಗಿ ಅವರು ತಿಳಿಸಿದ್ದಾರೆ.

     ಅವರ ಜೊತೆಯಲ್ಲಿ ಅನುಚಿತವಾಗಿ ವರ್ತಿಸಿದ್ದ ಕಾಂಗ್ರೆಸ್‌ ಕಾರ್ಯಕರ್ತರ ಅಮಾನತನ್ನು ತೆರವುಗೊಳಿಸಿದ್ದರಿಂದ  ಅಸಮಾಧಾನಗೊಂಡ ಪ್ರಿಯಾಂಕ ಅವರು ಈ ಘಟನೆಯ ಬಗ್ಗೆ  ಟ್ವೀಟ್‌ ಮಾಡಿದ್ದರು, ಕಷ್ಟಪಟ್ಟು ದುಡಿಯುವವರ ಬದಲು ಕೊಳಕು ಗೂಂಡಾಗಳಿಗೆ ಪಕ್ಷ ಆದ್ಯತೆ ನೀಡುತ್ತಿದೆ ಎಂದು ಕಿಡಿಕಾರಿದ್ದರು.

    ಪ್ರಿಯಾಂಕ ಚತುರ್ವೇದಿ ಕಾಂಗ್ರೆಸ್ ಪಕ್ಷದ ನಡೆಗೆ ಬೇಸತ್ತು ಪಕ್ಷಕ್ಕೆ ಗುಡ್ ಬೈ ಹೇಳುವ ಮೂಲಕ ಕಾಂಗ್ರೆಸ್ ಗೆ ದೊಡ್ಡ ಶಾಕ್ ನೀಡಿದ್ದಾರೆ. ಅಲ್ಲದೇ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ವಕ್ತಾರೆ ಎನ್ನುವುದನ್ನು ತೆಗೆದು ಹಾಕಿದ್ದಾರೆ. ಇತ್ತೀಚೆಗೆ ಉತ್ತರ ಪ್ರದೇಶದ ಮಥುರಾದಲ್ಲಿ ಪತ್ರಿಕಾಗೋಷ್ಠಿ ನಡೆಸುವ ವೇಳೆ ಕೆಲ ಕಾಂಗ್ರೆಸ್‌ ಕಾರ್ಯಕರ್ತರು ಪ್ರಿಯಾಂಕಾ ಚತುರ್ವೇದಿ ಜೊತೆ ಅನುಚಿತವಾಗಿ ವರ್ತಿಸಿದ್ದರು ಎಂದು ತಿಳಿದು ಬಂದಿದೆ.
   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link