‘ನನಗೆ ಬಿಜೆಪಿ ಸೆಟ್ಟಾಗ್ತಿಲ್ಲ’ -ಉಮೇಶ್ ಜಾಧವ್

ಕಲಬುರಗಿ: 

    ನನಗಿನ್ನೂ ಬಿಜೆಪಿ ಸೆಟ್ ಆಗುತ್ತಿಲ್ಲ. ನಿಮ್ಮ ಕಾಲಿಗೆ ಬಿದ್ದು ಕೇಳಿಕೊಳ್ಳುತ್ತೇನೆ. ನನಗೆ ಸಹಕಾರ ನೀಡಿ ಎಂದು ಎಂದು ಡಾ. ಉಮೇಶ್​​ ಜಾಧವ್​​​​​​ ಹೇಳಿಕೆ ನೀಡಿದ್ದಾರೆ.

      ಇಲ್ಲಿ ನಡೆದ ದಲಿತ ಸಮಾವೇಶದಲ್ಲಿ ಮಾತನಾಡಿದ ಬಿಜೆಪಿ ಅಭ್ಯರ್ಥಿ ಉಮೇಶ್​​​ ಜಾಧವ್​​​ ಅವರು, ನನಗೆ ಬಿಜೆಪಿ ಪಕ್ಷ ಸರಿಹೋಗುತ್ತಿಲ್ಲ. ನನ್ನ ಗೆಲುವಿಗೆ ನೀವು ಸಹಕಾರ ನೀಡಬೇಕು. ನಿಮ್ಮ ಕಾಲಿಗೆ ಬಿದ್ದು ಕೇಳಿಕೊಳ್ಳುವೆ ಎಂದು ಮಾಜಿ ಸಚಿವ ಗೋವಿಂದ ಕಾರಜೋಳ ಅವರಿಗೆ ಕೈಮುಗಿದು ಕೇಳಿಕೊಂಡಿದ್ದಾರೆ.

      ಹೈವೋಲ್ಟೇಜ್ ಕಣವಾಗಿರುವ ಕಲಬುರಗಿ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಎದುರು ಬಿಜೆಪಿ ಅಭ್ಯರ್ಥಿಯಾಗಿ ಡಾ. ಉಮೇಶ್ ಜಾಧವ್ ಸ್ಪರ್ಧಿಸಿದ್ದಾರೆ.

      ಕಾಂಗ್ರೆಸ್ ಶಾಸಕರಾಗಿದ್ದ ಉಮೇಶ್ ಜಾಧವ್ ಇತ್ತೀಚೆಗೆ ರಾಜೀನಾಮೆ ನೀಡಿ ಬಿಜೆಪಿ ಸೇರಿ ಅಭ್ಯರ್ಥಿಯಾಗಿದ್ದು, ಅವರ ಪರವಾಗಿ ಘಟಾನುಘಟಿ ನಾಯಕರು ಪ್ರಚಾರ ನಡೆಸಿದ್ದಾರೆ. ಹೀಗಿರುವಾಗಲೇ ಉಮೇಶ್ ಜಾಧವ್ ಪ್ರಚಾರ ಸಭೆಯಲ್ಲಿ ನೀಡಿದ ಹೇಳಿಕೆ ಚರ್ಚೆಗೆ ಕಾರಣವಾಗಿದೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

Recent Articles

spot_img

Related Stories

Share via
Copy link