ಹಗರಿಬೊಮ್ಮನಹಳ್ಳಿ:
ಬಳ್ಳಾರಿ ಲೋಕಸಭಾ ಚುನಾವಣೆಯಲ್ಲಿ ಮೈತ್ರಿಕೂಟದ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಉಗ್ರಪ್ಪನವರ ಗೆಲುವಿನೊಂದಿಗೆ ಮತ್ತೊಮ್ಮೆ ಬಳ್ಳಾರಿ ಜಿಲ್ಲೆ ಕಾಂಗ್ರೆಸ್ ಭದ್ರಕೋಟೆ ಎಂಬುದನ್ನು ಸಾರಿ ಹೇಳಲಿದೆ ಎಂದು ಕೆಪಿಸಿಸಿ ಕಾರ್ಯದರ್ಶಿ ದೇವೆಂದ್ರಪ್ಪ ಅಭಿಪ್ರಾಯ ಪಟ್ಟರು..
ಪಟ್ಟಣದ ಶಾಸಕ ಭೀಮಾನಾಯ್ಕರ ಜನ ಸಂಪರ್ಕ ಕಚೇರಿಯಲ್ಲಿ ಶನಿವಾರ ಕರೆಯಲಾಗಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಕಾಂಗ್ರೆಸ್ ಪಕ್ಷದ ಮುತ್ಸದಿ ರಾಜಕಾರಣಿ ವಿ.ಎಸ್.ಉಗ್ರಪ್ಪರನ್ನು ಜಿಲ್ಲೆಯ ಜನತೆ ಸಮಸ್ಯೆಗಳ ಧ್ವನಿಯಾಗಲಿದ್ದಾರೆ. ದೇಶದಲ್ಲಿ ಜಿಎಸ್ಟಿ ಹೊರೆ, ನೋಟು ಅಮಾನ್ಯಕರಣದಿಂದಾಗಿ ಬಡಜನರು ಪಟ್ಟ ಸಂಕಷ್ಟವನ್ನು ಈ ಬಾರಿ ತಮ್ಮ ಮತಗಳ ಮೂಲಕ ತಕ್ಕಪಾಠ ಕಲಿಸಲಿದ್ದಾರೆ.
ಬಿಜೆಪಿ ಪಕ್ಷ ಹಾಗೂ ದೇಶಕ್ಕಿಂತ ವ್ಯಕ್ತ ಪೂಜೆಯಲ್ಲಿ ತೊಡಗಿರುವ ಬಿಜೆಪಿ ಕಾರ್ಯಕರ್ತರು ಮೋದಿಯ ಜಪಮಾಡುತ್ತಿದೆ. ಬಿಜೆಪಿ ನ್ಯೂನತೆಗಳನ್ನು ಜನರು ಅರಿತಿದ್ದಾರೆ. ಹಗರಿಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಕಂಡಿರುವ ಸಾಕಷ್ಟು ಅಭಿವೃದ್ಧಿ ಕೆಲಸಗಳು ಕಾಂಗ್ರೆಸ್ಗೆ ವರವಾಗಲಿವೆ. ಈಗಾಗಲೇ ಕ್ಷೇತ್ರದಲ್ಲಿ ಎಲ್ಲಾ ಬೂತ್ಮಟ್ಟದಲ್ಲಿ ಪ್ರಚಾರ ಕಾರ್ಯ ಪೂರ್ಣಗೊಳಿಸಲಾಗಿದೆ. ಸಾಮಾನ್ಯ ಜನರ ಒಲವು ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಅಭ್ಯರ್ಥಿ ಉಗ್ರಪ್ಪನವರ ಪರವಾಗಿದೆ. ಉಪಚುನಾವಣೆಯಲ್ಲಿ ಪಡೆದ ಮತಗಳಿಗಿಂತ ಹೆಚ್ಚಿನ ಮತಗಳನ್ನು ಪಡೆಯುವ ಭರವಸೆ ಕೂಡ ಇದೆ ಎಂದರು.
ಶಾಸಕ ಎಸ್.ಭೀಮಾನಾಯ್ಕ, ಜೆಡಿಎಸ್ ತಾಲೂಕಾಧ್ಯಕ್ಷ ಬನ್ನಿಗೋಳ ವೆಂಕಣ್ಣ, ಮಾಜಿ ಜಿಪಂ ಸದಸ್ಯರಾದ ಅಕ್ಕಿ ತೋಟೇಶ್, ಹೆಗ್ಡಾಳ್ ರಾಮಣ್ಣ, ಹಂಪಾಪಟ್ಟಣ ಭೀಮಜ್ಜ ಇದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
