ಬೆಂಗಳೂರು:
ಅಭಿವೃದ್ಧಿ ರಾಜಕಾರಣಕ್ಕೆ ಜನರು ಮನ್ನಣೆ ನೀಡುತ್ತಾರೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಕಲಬುರಗಿ ಮತದಾರರು ಎಂದಿನಂತೆ ಈ ಬಾರಿಯೂ ನನ್ನನ್ನು ಗೆಲ್ಲಿಸಲಿದ್ದಾರೆ ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.
ತತ್ವ ಸಿದ್ದಾಂತಗಳ ಆಧಾರದ ಮೇಲೆ ರಾಜಕೀಯ ಮಾಡಿಕೊಂಡು ಬಂದಿದ್ದೇನೆ. ಕಳೆದ 50 ವರ್ಷಗಳ ಅವಧಿಯಲ್ಲಿ ಈ ಭಾಗದ ಅಭಿವೃದ್ಧಿಗೆ ಶ್ರಮಿಸಿದ್ದೇನೆ, ಕೇಂದ್ರೀಯ ವಿಶ್ವವಿದ್ಯಾಲಯ, ಇಎಸ್ಐ ಆಸ್ಪತ್ರೆ, ದಂತ ವೈದ್ಯಕೀಯ ಕಾಲೇಜು, ಕೌಶಲ್ಯಾಭಿವೃದ್ಧಿ ಕೇಂದ್ರಗಳನ್ನು ಜಿಲ್ಲೆಯಲ್ಲಿ ಸ್ಥಾಪಿಸಿದ್ದು, ಅಭಿವೃದ್ಧಿ ಕೆಲಸ ಕಾರ್ಯಗಳು ಗೆಲುವಿಗೆ ಸಹಕಾರಿಯಾಗಲಿದೆ ಎಂಬ ಆಶಯವನ್ನು ಮಲ್ಲಿಕಾರ್ಜುನ ಖರ್ಗೆ ವ್ಯಕ್ತಪಡಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
