ಹಿರಿಯೂರು :
ನಗರದ ಪ್ರಧಾನ ರಸ್ತೆಯಲ್ಲಿರುವ ಶ್ರೀಸತ್ಯನಾರಾಯಣಸ್ವಾಮಿ ದೇವಾಲಯದಲ್ಲಿ ಶ್ರೀರಾಮ ಸೇವಾ ಸಮಿತಿ ವತಿಯಿಂದ ಶ್ರೀರಾಮನವಮಿ ಅಂಗವಾಗಿ ಆಯೋಜಿಸಿದ್ದ ರಾಮೋತ್ಸವ ವಿಶೇಷ ಪೂಜಾ ಕಾರ್ಯಕ್ರಮ ಹಾಗೂ ಸಂಜೆಯ ಸಾಂಸ್ಕೃತಿಕ ಕಾರ್ಯಕ್ರಮ ಮುಕ್ತಾಯವಾಯಿತು.
ಈ ಕಾರ್ಯಕ್ರಮದಲ್ಲಿ ಪ್ರತೀ ವರ್ಷದಂತೆ ಈ ವರ್ಷವೂ ಸಹಾ ದೇವಾಲಯದಲ್ಲಿ ಸಾಮೂಹಿಕ ಶ್ರೀಸತ್ಯನಾರಾಯಣಸ್ವಾಮಿಯ ಪೂಜೆ ನಡೆಯಿತು. ಸ್ವಾಮಿಗೆ ಮುಂಜಾನೆಯಿಂದಲೇ ಅರ್ಚನೆ ಅಭಿಷೇಕ ಸತ್ಯನಾರಾಯಣಸ್ವಾಮಿಯ ಕಥಾಶ್ರವಣ ಹಾಗೂ ಮಹಾಮಂಗಳಾರತಿ ತೀರ್ಥಪ್ರಸಾದ ವಿನಿಯೋಗ ಮತ್ತು ಅನ್ನದಾಸೋಹ ಕಾರ್ಯಕ್ರಮ ನಡೆಯಿತು. ಶ್ರೀರಾಮಸೇವಾಸಮಿತಿ ಪದಾಧಿಕಾರಿಗಳು ಹಾಗೂ ನಗರದ ಅನೇಕ ಭಕ್ತರು ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.