ಬೆಂಗಳೂರು :
ಸಿದ್ದರಾಮಯ್ಯಮತ್ತೊಮ್ಮೆ ಸಿಎಂ ಆಗ್ತಾರೆ ಎಂದು ಹೇಳಿಕೆ ನೀಡುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಬುಧವಾರ ಸಿಎಂ ಕಚೇರಿಯಲ್ಲಿ ಡಿಸಿಎಂ ಪರಮೇಶ್ವರ್ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಜೊತೆ ಚರ್ಚೆ ನಡೆಸಿದ್ದ ಸಿಎಂ ಕುಮಾರಸ್ವಾಮಿ ಕಾಂಗ್ರೆಸ್ ನಾಯಕರ ಹೇಳಿಕೆಯ ಬಗ್ಗೆ ತಮ್ಮ ಬೇಸರವನ್ನು ಹೊರಹಾಕಿದ್ದಾರೆ ಎನ್ನಲಾಗಿದೆ.
ನಿಮ್ಮ ಪಕ್ಷದ ಶಾಸಕರು ಪದೇ ಪದೇ ಸಿಎಂ ಸ್ಥಾನದ ವಿಚಾರ ಪ್ರಸ್ತಾಪ ಮಾಡಿದ್ದಾರೆ.
ನಾನು ರಾಜ್ಯದ ಮುಖ್ಯಮಂತ್ರಿಯಾಗಿರುವಾಗ ಹೀಗೆ ಹೇಳಿಕೆ ನೀಡುವುದು ಸರಿಯೇ..? ಜನರಲ್ಲಿ ನನ್ನ ಬಗ್ಗೆ ಯಾವ ರೀತಿಯ ಭಾವನೆ ಮೂಡಲಿದೆ ನೀವೆ ಹೇಳಿ,. ?ಸಮ್ಮಿಶ್ರ ಸರ್ಕಾರ ನಡೆಸುವ ನನಗೆ ಮುಜುಗರ ಆಗುತ್ತಿದೆ. ಮೊದಲು ಇಂತಹ ಹೇಳಿಕೆಗಳಿಗೆ ಬ್ರೇಕ್ ಹಾಕಿ, ನಿಮ್ಮ ಶಾಸಕರನ್ನು ಕರೆಸಿ ಸ್ವಲ್ಪ ಹೇಳಿ ಎಂದು ಸಿಎಂ ಖಡಕ್ ಆಗ ಹೇಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
