ಅನ್ಯ ಭಾಷಿಕರು ಕನ್ನಡ ಕಲಿಯಬೇಕು

ಹುಳಿಯಾರು

    ಕನ್ನಡವನ್ನು ಬಿಟ್ಟು ಉರ್ದು, ತಮಿಳು ಮುಂತಾದ ಅನ್ಯ ಭಾಷಿಕರು ಕರ್ನಾಟಕದಲ್ಲಿ ಬದುಕನ್ನು ಕಟ್ಟಿಕೊಂಡಿದ್ದಾರೆ. ಇವರು ಕನ್ನಡ ಕಲಿಯಬೇಕು ಮತ್ತು ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಬೇಕು. ಆಗ ಮಾತ್ರವೇ ಅವರು ಮುಖ್ಯವಾಹಿನಿಗೆ ಸೇರಲು ಸಾಧ್ಯ ಎಂದು ತಾಲೂಕು ಕಸಾಪ ಅಧ್ಯಕ್ಷೆ ಎನ್.ಇಂದಿರಮ್ಮ ತಿಳಿಸಿದರು.

    ಹುಳಿಯಾರಿನ ಆಜಾದ್ ನಗರದ ಉರ್ದು ಶಾಲೆಯಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ತಾಲೂಕು ಕಸಾಪ ಕೋಶಾಧ್ಯಕ್ಷ ರಾಮಕೃಷ್ಣಪ್ಪ ಅವರು ಮಾತನಾಡಿ ಉರ್ದು ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢ ಹಂತಕ್ಕೆ ಮಾತ್ರ ಸೀಮಿತವಾಗಿರುವುದರಿಂದ ಉರ್ದು ಮಾಧ್ಯಮದಲ್ಲಿ ಉನ್ನತ ಶಿಕ್ಷಣ ಪಡೆಯಲು ಸಾಧ್ಯವಿಲ್ಲ ಎಂದರು.

     ಬಿಎಂಎಸ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕಿ ಬಿ.ವಿನುತ, ಹುಳಿಯಾರು ಕಸಾಪ ಅಧ್ಯಕ್ಷ ಯಲ್ಲಪ್ಪ, ಕಾರ್ಯದರ್ಶಿ ದಯಾನಂದ್, ಗ್ರಾಪಂ ಮಾಜಿ ಸದಸ್ಯೆ ಹಸೀನಾಬಾನು, ಸೃಜನಾ ಘಟಕದ ಅಧ್ಯಕ್ಷೆ ಪೂರ್ಣಮ್ಮ, ಸಂಜೀವಿನಿ ಮಹಿಳಾ ಒಕ್ಕೂಟದ ಸರಸ್ವತಿ, ಶಿಕ್ಷಕಿ ಇಂದಿರಮ್ಮ, ಆಶಾ ಕಾರ್ಯಕರ್ತೆ ಯಶೋಧ ಮತ್ತಿತರರು ಇದ್ದರು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link