ಮಂಡ್ಯ :
ಲೋಕಸಭಾ ಚುನಾವಣೆಯ ಮತಎಣಿಕೆ ಕಾರ್ಯ ಮೇ 23 ರಂದು ನಡೆಯುವ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ಮದ್ಯ ಮಾರಾಟಕ್ಕೆ ಬ್ರೇಕ್ ಹಾಕಿದೆ.
ರಾಜ್ಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಫಲಿತಾಂಶದ ದಿನ ಕಲ್ಲು ತೂರಾಟ, ಗಲಭೆ ಸಾಧ್ಯತೆ ಇದೆ. ಹಾಗಾಗಿ ಜಿಲ್ಲಾದ್ಯಂತ ಯಾವುದೇ ಅನಾಹುತ ಸಂಭವಿಸದಂತೆ ತಡೆಯಲು ಮುನ್ನೆಚ್ಚರಿಕಾ ಕ್ರಮವಾಗಿ ಮಂಡ್ಯ ಜಿಲ್ಲೆಯಲ್ಲಿ ಭದ್ರತೆ ಒದಗಿಸುವಂತೆ ಕೋರಿ ಜಿಲ್ಲಾಧಿಕಾರಿ ಚುನಾವಣಾ ಆಯೋಗಕ್ಕೆ ಪತ್ರ ಸಲ್ಲಿಸಿದ್ದರು.
ಈ ವರದಿ ಆಧರಿಸಿ ಚುನಾವಣಾ ಆಯೋಗವು ಇದೀಗ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾದ್ಯಂತ ಮಂಡ್ಯ ಜಿಲ್ಲಾಡಳಿತ ಮೇ.23, 24 ರಂದು 2 ದಿನ ನಿಷೇಧಾಜ್ಞೆ ಜಾರಿಗೊಳಿಸಿದ್ದು, ಫಲಿತಾಂಶದ ದಿನ ಸಭೆ ಸೇರುವುದು, ವಿಜಯೋತ್ಸವ ಆಚರಣೆ ಮಾಡುವುದು, ಪಟಾಕಿ ಸಿಡಿಸುವುದು, ಗುಂಪು ಸೇರುವುದು ಮತ್ತು ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ.
ಫಲಿತಾಂಶದ ದಿನ ಕಟ್ಟೆಚ್ಚರ ವಹಿಸುವಂತೆ ಚುನಾವಣೆ ಆಯೋಗ ಪೊಲೀಸ್ ಇಲಾಖೆಗೆ ಆದೇಶಿಸಿದೆ. ಸಿಆರ್ ಪಿಎಫ್ ಯೋಧರು ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ಭದ್ರತೆಗಾಗಿ ಆಯೋಜಿಸುವಂತೆ ಆಯೋಗ ಸೂಚನೆ ನೀಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
