ಹುಬ್ಬಳ್ಳಿ :
ನಮ್ಮ ರಾಜ್ಯದಲ್ಲಿ ನಡೆಯುತ್ತಿರುವ ಉಪಚುನಾವಣೆಯ ಮತದಾನ ಬೆಳ್ಳಗ್ಗಿನಿಂದಲೆ ಬಿರುಸಾಗಿದ್ದು 11 ಗಂಟೆಯ ಸುಮಾರಿಗೆ ಶೇ23.12ರಷ್ಟು ಮತದಾನ ಆಗಿದೆ ಎಂದು ವರದಿಯಾಗಿದೆ.
ಕೊಡ್ಲಿಗಿಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದ್ದು, ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದ್ದಾರೆ ಮತ್ತು ಕುಂದಗೋಳದ ಅದರಗುಂಚಿ ಬೂತ್ನಲ್ಲಿ ಬಿಜೆಪಿ ಅಭ್ಯರ್ಥಿ ಚಿಕ್ಕನಗೌಡರ್ ಅವರು ಕುಟುಂಬ ಸಮೇತ ಆಗಮಿಸಿ ಹಕ್ಕು ಚಲಾಯಿಸಿದ್ದಾರೆ.
ಚಿಂಚೋಳಿಯ ಬೆಡಸೂರದಲ್ಲಿ ಡಾ.ಉಮೇಶ್ ಜಾಧವ್, ಬಿಜೆಪಿ ಅಭ್ಯರ್ಥಿ ಡಾ.ಅವಿನಾಶ್ ಜಾಧವ್ ಮತ್ತು ಕುಟುಂಬ ಸದಸ್ಯರು ಹಕ್ಕು ಚಲಾಯಿಸಿದ್ದಾರೆ.ಮತದಾನಕ್ಕೂ ಮುನ್ನ ಅವಿನಾಶ್ ಜಾಧವ್ ಪತ್ನಿಯೊಂದಿಗೆ ರೇವಣಸಿದ್ದೇಶ್ವರ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.ಚಿಂಚೋಳಿಯ ಮತಗಟ್ಟೆಯೊಂದರಲ್ಲಿ ಇವಿಎಂನಲ್ಲಿ ತಾಂತ್ರಿಕ ದೋಷ ಕಂಡು ಬಂದ ಬಗ್ಗೆ ವರದಿಯಾಗಿದೆ.ಚಿಂಚೋಳಿ ಕಾಂಗ್ರೆಸ್ ಅಭ್ಯರ್ಥಿ ಸುಭಾಷ ರಾಠೋಡ್ ಅವರು ಸೇರಿ ತಾಂಡಾದಲ್ಲಿ ತಮ್ಮ ಹಕ್ಕು ಚಲಾಯಿಸಿದರು.ಚಿಂಚೋಳಿ ಮತ್ತು ಕುಂದಗೋಳದಲ್ಲಿ ವ್ಯಾಪಕ ಭದ್ರತೆ ಕೈಗೊಳ್ಳಲಾಗಿದೆ. ಚುನಾವಣಾ ಆಯೋಗ ಎಲ್ಲೆಡೆ ಹದ್ದಿನ ಕಣ್ಣಿರಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
