ಬೆಂಗಳೂರು:
ತುಮಕೂರಿನಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಕಾಂಗ್ರೆಸ್ಸಿಗರ ಕೊಡುಗೆಯೂ ಇದೆ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ನಾಯಕ ವಿ.ಸೋಮಣ್ಣ ಹೇಳಿಕೆ ನೀಡಿದ್ದಾರೆ.
ನಿನ್ನೆ ಲೋಕಸಭಾ ಚುನಾವಣೆಯ ಫಲಿತಾಂಶ ಬಂದಿದ್ದು, ತುಮಕೂರಿನಲ್ಲಿ ಮೈತ್ರಿ ಕೂಟದಿಂದ ಸ್ಪರ್ಧಿಸಿದ್ದ ಜೆಡಿಎಸ್ ವರಿಷ್ಠ ದೇವೇಗೌಡ, ಬಿಜೆಪಿ ಅಭ್ಯರ್ಥಿ ವಿರುದ್ಧ 13 ಸಾವಿರ ಮತಗಳ ಅಂತರದಿಂದ ಸೋಲನುಭವಿಸಿದ್ದಾರೆ. ಈ ಕುರಿತು ಸೋಮಣ್ಣ ಹೇಳಿಕೆ ನೀಡಿದ್ದಾರೆ.
ತುಮಕೂರಿನಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಕಾಂಗ್ರೆಸ್ಸಿಗರ ಕೊಡುಗೆಯೂ ಇದೆ. ಸಮಯದಲ್ಲಿ ಒಂದು ಹುಲ್ಲುಕಡ್ಡಿಯೂ ನೆರವಿಗೆ ಬರುತ್ತದೆ ಎಂಬುದನ್ನು ಎಷ್ಟೇ ದೊಡ್ಡವರಾದರೂ ನೆನಪಿಸಿಕೊಳ್ಳಬೇಕು. ಇಲ್ಲವಾದರೆ ಇಂತಹಾ ಅವ್ಯವಸ್ಥೆಗಳಾಗುತ್ತವೆ. ಹಾಗೆ ಆಗಬಾರದಿತ್ತು, ಆದರೆ ಆಗಿದೆ. ಏನು ಮಾಡಲು ಸಾಧ್ಯ, ಪ್ರಕೃತಿ ನಿಯಮ. ಅದರಂತೆ ಆಗಿದೆ. ಎಂದಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
